ಮಂಗಳವಾರ, ಅಕ್ಟೋಬರ್ 29, 2024

ಸರ್ಕಾರಿ ನೌಕರರ ಸಂಘದ ಚುನಾವಣೆ : ನಾಲ್ವರು ಗೆಲುವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ೪ ಜನ ಗೆಲುವು ಸಾಧಿಸಿದ್ದಾರೆ. 
    ಒಟ್ಟು ೪ ಸ್ಥಾನಗಳಿಗೆ ಉಮೇಶಪ್ಪ, ಡಾ.ಎಚ್.ಎಸ್ ಗಿರೀಶ್, ಎಚ್.ಎಂ ನಾಗರಾಜಪ್ಪ, ಪದ್ಮರಾಜ ಶೆಟ್ಟಿ, ಕೆ. ರಮೇಶ್, ಆರ್. ರೀನಾ, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು  ಎಂ.ಎಚ್ ಹರೀಶ್ ಸೇರಿದಂತೆ ಒಟ್ಟು ೮ ಸ್ಪರ್ಧಿಗಳು ಸ್ಪರ್ಧಿಸಿದ್ದರು. ಈ ಪೈಕಿ ಡಾ.ಎಚ್.ಎಸ್ ಗಿರೀಶ್, ಕೆ. ರಮೇಶ್, ಶ್ರೀನಿವಾಸ್ ಎಚ್. ಬಾಗೋಡಿ ಮತ್ತು ಆರ್. ರೀನಾ ಗೆಲುವು ಸಾಧಿಸಿದ್ದಾರೆ. 
    ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಯ್ಕೆಯಾದ ಕಾರ್ಯಕಾರಿ ಸಮಿತಿ ನೂತನ ಸದಸ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಭಿನಂದನೆ ಸಲ್ಲಿಸಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ