ಭದ್ರಾವತಿ ನಗರದ ನ್ಯೂಟೌನ್ ಆಂಜನೇಯ ಅಗ್ರಹಾರದ ಮುಖ್ಯರಸ್ತೆಯಲ್ಲಿ ಬಾಲಕರ ವಿದ್ಯಾರ್ಥಿ ನಿಲಯದ ಸಮೀಪ ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಭಾನುವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಭದ್ರಾವತಿ: ನಗರದ ನ್ಯೂಟೌನ್ ಆಂಜನೇಯ ಅಗ್ರಹಾರದ ಮುಖ್ಯರಸ್ತೆಯಲ್ಲಿ ಬಾಲಕರ ವಿದ್ಯಾರ್ಥಿ ನಿಲಯದ ಸಮೀಪ ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಭಾನುವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಯುವಕರು ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬರುತ್ತಿದ್ದು, ಈ ಬಾರಿ ವಿಶೇಷವಾಗಿ ಸಿಂಹದ ಆಸನದ ಮೇಲೆ ಕುಳಿತ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅ.೨೭ರಂದು ಈ ಮೂರ್ತಿಯ ವಿಸರ್ಜನೆ ನಡೆಯಲಿದೆ.
ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ನ್ಯೂಟೌನ್, ಆಂಜನೇಯ ಅಗ್ರಹಾರ, ವಿದ್ಯಾಮಂದಿರ ಸೇರಿದಂತೆ ಸುತ್ತಮತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment