Monday, October 21, 2024

ಮಾದಕ ವಸ್ತು ಗಾಂಜಾ ಸೇವನೆ : ಪ್ರಕರಣ ದಾಖಲು

    

    ಭದ್ರಾವತಿ : ಹೊಸಮನೆ ಸಂತೆ ಮೈದಾನ ಏರಿಯಾದಲ್ಲಿ ಮಾದಕ ವಸ್ತು ಸೇವನೆ ಮಾಡಿ ಅಮಲಿನಿಂದ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
    ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಅಮಾತಿ ಅ.೧೯ರಂದು ಗಸ್ತು ಕರ್ತವ್ಯದಲ್ಲಿದ್ದಾಗ ವ್ಯಕ್ತಿಯೋರ್ವ ಅಮಲಿನಿಂದ ವರ್ತಿಸುತ್ತಿರುವುದು ಕಂಡು ಬಂದಿದ್ದು, ಈತ ಸಾರ್ವಜನಿಕರಿಗೆ ತೊಂದರೆ ನೀಡಬಹುದೆಂಬ ಅನುಮಾನದ ಮೇರೆಗೆ ವಶಕ್ಕೆ ಪಡೆದು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಲಾಗಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

No comments:

Post a Comment