Saturday, October 5, 2024

ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅಮ್ಮನವರಿಗೆ ನವದುರ್ಗಿಯರ ವಿಶೇಷ ಅಲಂಕಾರ

ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ನವದುರ್ಗಿಯರ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. ಶನಿವಾರ ಧನ್ವಂತರಿ ಮಹಾವಿಷ್ಣು ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ : ನಗರದ ಹೊಸಸೇತುವೆ ರಸ್ತೆಯ ಭದ್ರಾ ನದಿ ದಡದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ನವದುರ್ಗಿಯರ ವಿಶೇಷ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. 
    ಪ್ರತಿ ದಿನ ಸಂಜೆ ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಅನ್ನಸಂತರ್ಪಣೆ ನೆರವೇರಿಸಿಕೊಂಡು ಬರಲಾಗುತ್ತಿದೆ. 
ಈ ಬಾರಿ ಬನಶಂಕರಿ ಅಮ್ಮನವರಿಗೆ ಮೊದಲ ದಿನ ಪುಷ್ಪಾಲಂಕಾರ, ಎರಡನೇ ದಿನ ಸ್ಕಂದ ಮಾತಾ ಅಲಂಕಾರ ಹಾಗು ಮೂರನೇ ದಿನ ಧನ್ವಂತರಿ ಮಹಾವಿಷ್ಣು ಅಲಂಕಾರ ಕೈಗೊಳ್ಳಲಾಗಿತ್ತು. 
    ದೇವಸ್ಥಾನ ಸೇವಾ ಸಮಿತಿ ಹಾಗು ದೇವಾಂಗ ಸಮಾಜದ ಪ್ರಮುಖರು, ನಗರದ ದಾನಿಗಳು, ಸೇವಾಕರ್ತರು ಹಾಗು ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಅಮ್ಮನವರ ಅಲಂಕಾರ ಕಣ್ತುಂಬಿಕೊಳ್ಳುತ್ತಿದ್ದಾರೆ. 

No comments:

Post a Comment