Monday, October 14, 2024

`ಸ್ವಚ್ಛತಾ ಹಿ ಸೇವಾ-೨೦೨೪' ಅಭಿಯಾನ : ವಿಐಎಸ್‌ಎಲ್ ಅಧಿಕಾರಿಗಳು, ಕಾರ್ಮಿಕರಿಗೆ ಸಸಿ ವಿತರಣೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ `ಸ್ವಚ್ಛತಾ ಹಿ ಸೇವಾ-೨೦೨೪' ಅಭಿಯಾನದ ಅಂಗವಾಗಿ ಕಾರ್ಖಾನೆ ಆವರಣ ಮತ್ತು ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನೌಕರರು ಮತ್ತು ಗುತ್ತಿಗೆ ಕಾರ್ಮಿಕರಿಗೆ ಸಸಿಗಳನ್ನು ವಿತರಿಸಲಾಯಿತು.
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ `ಸ್ವಚ್ಛತಾ ಹಿ ಸೇವಾ-೨೦೨೪' ಅಭಿಯಾನದ ಅಂಗವಾಗಿ ಕಾರ್ಖಾನೆ ಆವರಣ ಮತ್ತು ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನೌಕರರು ಮತ್ತು ಗುತ್ತಿಗೆ ಕಾರ್ಮಿಕರಿಗೆ ಸಸಿಗಳನ್ನು ವಿತರಿಸಲಾಯಿತು.
    ಕಾರ್ಖಾನೆ ವತಿಯಿಂದ ಸೆಪ್ಟಂಬರ್ ಮತ್ತು ಅಕ್ಟೋಬರ್ ಎರಡು ತಿಂಗಳ ಅವಧಿಯಲ್ಲಿ ಸಾವಿರ ಸಸಿಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು,   ಈ ಅಭಿಯಾನದ ಭಾಗವಾಗಿ ಹೊಂಗೆ, ಅಶೋಕ, ಹಲಸು, ಅಡಕೆ ಮತ್ತು ತುಳಸಿ ತಳಿಯ ಸುಮಾರು ೭೦೦ ಸಸಿಗಳನ್ನು ಈಗಾಗಲೇ ನೌಕರರಿಗೆ ಮತ್ತು ಗುತ್ತಿಗೆ ಕಾರ್ಮಿಕರಿಗೆ ವಿತರಿಸಲಾಗಿದೆ. ತಾಲೂಕು ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಹಸಿರು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. 
    ಈ ನಡುವೆ ಅಭಿಯಾನದ ಸಂದರ್ಭದಲ್ಲಿ ಶಿವಮೊಗ್ಗ ಪರಿಸರ ಅಧಿಕಾರಿ ವಿ. ರಮೇಶ್ ಮತ್ತು ಉಪ ಪರಿಸರ ಅಧಿಕಾರಿ ಕೆ. ಶಿಲ್ಪಾ ಕಾರ್ಖಾನೆ ಹಾಗು ವಿಐಎಸ್‌ಎಲ್ ಅತಿಥಿ ಗೃಹ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. 
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಾಂದ್ವಾನಿ,   ಪ್ರಭಾರ ಮುಖ್ಯ ಪ್ರಧಾನ ವ್ಯವಸ್ಥಾಪಕ(ಕಾರ್ಯಗಳು) ಟಿ. ರವಿಚಂದ್ರನ್, ಮುಖ್ಯ ಪ್ರಧಾನ ವ್ಯವಸ್ಥಾಪಕ(ಎಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕಗಳು) ಎಲ್. ಪ್ರವೀಣ್ ಕುಮಾರ್, ಮುಖ್ಯ ಪ್ರಧಾನ ವ್ಯವಸ್ಥಾಪಕ (ಇಎಂಡಿ ಮತ್ತು ಸಿಇ-ಸ್ಥಾವರ) ಎಂ. ಸುಬ್ಬರಾವ್ ಹಾಗು ಸಹಾಯಕ ಪ್ರಧಾನ ವ್ಯವಸ್ಥಾಪಕ ವಿಕಾಸ್ ಬಾಸರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment