Friday, October 18, 2024

ಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾಕವಿ, ರಾಮಾಯಣದ ಕರ್ತೃ, ಮಹಾಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. 
    ಭದ್ರಾವತಿ: ತಾಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾಕವಿ, ರಾಮಾಯಣದ ಕರ್ತೃ, ಮಹಾಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. 
    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಮಹಾಕಾವ್ಯ ರಾಮಾಯಣ ರಚಿಸಿ ಜಗತ್ತಿಗೆ ಹಲವು ಆದರ್ಶ ಮೌಲ್ಯಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ ಅವರ ಸಮನ್ವಯತೆಯ ವಿಚಾರಗಳು ಸರ್ವಕಾಲಕ್ಕೂ ಸತ್ಯವಾದುದು.ಎಂದರು.
ಕಾರ್ಯಕ್ರಮದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಸರ್ಕಾರದ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಆಯ್ಕೆಯಾದ ಶಾಲೆಯ ೩ ವಿದ್ಯಾರ್ಥಿಗಳನ್ನು ಹಾಗು ಈ ಯೋಜನೆಗೆ ವಿದ್ಯಾರ್ಥಿಗಳನ್ನು ತಯಾರುಗೊಳಿಸಿದ ಶಿಕ್ಷಕರನ್ನು ಅಭಿನಂದಿಸಲಾಯಿತು.  
ಪ್ರಭಾರಿ ಮುಖ್ಯ ಶಿಕ್ಷಕ ಎಂ. ದಿವಾಕರ್ ಅಧ್ಯಕ್ಷತೆವಹಿಸಿದ್ದರು.   
     ಎಸ್‌ಡಿಎಂಸಿ ಉಪಾಧ್ಯಕ್ಷ ಸುರೇಶ್ ಹಾಗು ಸದಸ್ಯರು, ಶಿಕ್ಷಕಿ ಜಾನಕಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಶಿಕ್ಷಕಿಯರಾದ ಮಮತಾ ಸ್ವಾಗತಿಸಿ, ರೇಣುಕಾ ವಂದಿಸಿದರು. ಶಾಂತಪ್ಪ ಕಾರ್ಯಕ್ರಮ ನಿರೂಪಿಸಿದರು. 

No comments:

Post a Comment