Thursday, October 17, 2024

ನಿವೃತ್ತ ಉಪ ವ್ಯವಸ್ಥಾಪಕ ಪದ್ಮನಾಭ ಗೊಲ್ಲ ನಿಧನ

ಪದ್ಮನಾಭ ಗೊಲ್ಲ 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಉಪ ವ್ಯವಸ್ಥಾಪಕ ಪದ್ಮನಾಭ ಗೊಲ್ಲ(೮೨) ಬುಧವಾರ ನಿಧನ ಹೊಂದಿದರು.
    ಇವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಪದ್ಮನಾಭರವರು ವಿಐಎಸ್‌ಎಲ್ ಕಾರ್ಖಾನೆಯ ಅನಿಲ ಮತ್ತು ಇಂಧನ ಇಲಾಖೆಯಲ್ಲಿ ಉಪ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಜೋಗದಲ್ಲಿ ನಡೆಯಿತು. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ. 

1 comment:

  1. Let his soul be in peace, om shanthi shanthi

    ReplyDelete