Friday, October 25, 2024

ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡಿ

ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಭದ್ರಾವತಿ : ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರು ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದು, ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಉಂಬ್ಲೆಬೈಲು ಕಲ್ಲಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಇತರೆ ೨೮ ಗ್ರಾಮಗಳನ್ನೊಳಗೊಂಡ ಸುಮಾರು ೪೮ ಕೋಟಿ ರೂ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. 
    ಶಿವಮೊಗ್ಗ ಜಿಲ್ಲೆ ಕುಂಸಿ ಮತ್ತು ೮೯ ಜನ ವಸತಿಗಳನ್ನೊಳಗೊಂಡ ಹಾಗೂ ಗಾಜನೂರು ಮತ್ತು ೧೫ ಜನ ವಸತಿಗಳನ್ನೊಳಗೊಂಡ ಸುಮಾರು ೧೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವುದು ಹಾಗು ತಾಲೂಕಿನ ಆನವೇರಿ ಮತ್ತು ೩೭ ಇತರೆ ಗ್ರಾಮಗಳಿಗೆ ಸುಮಾರು ೩೬.೧೧ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಕೋರಲಾಗಿದೆ. 
    ತಾಲೂಕಿನ ಮಾರಶೆಟ್ಟಿಹಳ್ಳಿ ಮತ್ತು ಇತರೆ ೨೩ ಗ್ರಾಮಗಳಿಗೆ ೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ವಿನಂತಿಸಲಾಗಿದೆ. 

No comments:

Post a Comment