Tuesday, October 22, 2024

ಕಾಡುಕೋಣ ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಇಬ್ಬರ ಸೆರೆ

ಭದ್ರಾವತಿ ಅರಣ್ಯ ವಿಭಾಗದ ತಂಡ ಯಶಸ್ವಿ ಕಾರ್ಯಾಚರಣೆ 

ಕಾಡುಕೋಣ ಹತ್ಯೆ ಮಾಡಿ ಹೊಲದಲ್ಲಿ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಭದ್ರಾವತಿ ಅರಣ್ಯ ವಿಭಾಗದ ತಂಡ ಯಶಸ್ವಿಯಾಗಿದೆ. 
    ಭದ್ರಾವತಿ : ಕಾಡುಕೋಣ ಹತ್ಯೆ ಮಾಡಿ ಹೊಲದಲ್ಲಿ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಇಲ್ಲಿನ ಅರಣ್ಯ ವಿಭಾಗದ ತಂಡ ಯಶಸ್ವಿಯಾಗಿದೆ. 
    ಕಾಡುಕೋಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಶ್ರೀನಿವಾಸಪುರ ನಿವಾಸಿ ಶಿವರಾಮ(೬೫) ಮತ್ತು ಉಕ್ಕುಂದ ಗ್ರಾಮದ ನಿವಾಸಿ ರಂಗಸ್ವಾಮಿ(೩೮) ಸೇರಿದಂತೆ ೩ ಜನರ ವಿರುದ್ಧ ಅ.೧೭ರಂದು ಪ್ರಕರಣ ದಾಖಲಾಗಿತ್ತು. ಈ ಪೈಕಿ ಶಿವರಾಮ ಮತ್ತು ರಂಗಸ್ವಾಮಿ ತಲೆ ಮರೆಸಿಕೊಂಡಿದ್ದರು. 
    ಇವರ ಪತ್ತೆಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ ರತ್ನಪ್ರಭಾ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಬಿ.ಎಚ್ ದುಗ್ಗಪ್ಪರವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಉಪವಲಯ ಅರಣ್ಯ ಅಧಿಕಾರಿಗಳಾದ, ಪಿ. ಅಣ್ಣ ನಾಯ್ಕ್, ಕೃಷ್ಣಾರೆಡ್ಡಿ, ಶೇಖರ್ ಚೌಗುಲೆ, ಹನುಮಂತ ನಾಯ್ಕ್, ಕೋರ್ಟ್ ಅಂಡ್ ಸರ್ವೆ ಸಿಬ್ಬಂದಿ ಹನುಮಂತರಾಯ ಗಸ್ತು ಅರಣ್ಯ ಪಾಲಕರಾದ ಎಸ್. ಕಾಂತೇಶ್ ನಾಯ್ಕ್, ವಿನೋದ್ ಬಿರಾದರ್, ಬಾಲರಾಜ್, ಪಿ. ನಾಗೇಂದ್ರ, ಸಿ. ಚಂದ್ರಶೇಖರ್, ಪ್ರಥಮ ದರ್ಜೆ ಸಹಾಯಕ ಎಸ್. ಎಲ್ ಸಂತೋಷ್ ಕುಮಾರ್ ಹಾಗೂ ಅರಣ್ಯ ವೀಕ್ಷಕರು ತಂಡದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  ತಂಡ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಅರಣ್ಯ ವಿಭಾಗದ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

No comments:

Post a Comment