ಭದ್ರಾವತಿ : ನ್ಯೂಟೌನ್ ಶ್ರೀ ಕರುಮಾರಿಯಮ್ಮ ದೇವಸ್ಥಾನದಲ್ಲಿ ನಾಡಹಬ್ಬ ದಸರಾ ಉತ್ಸವ ಕಡೆ ದಿನ ಅಮ್ಮನವರಿಗೆ ಚಾಮುಂಡೇರಿಶ್ವರಿ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ಉತ್ಸವ ಮೆರವಣಿಗೆ ನಡೆಸಿ ಸಂಪನ್ನಗೊಳಿಸಲಾಯಿತು.
ದಸರಾ ಆಚರಣೆ ೯ ದಿನಗಳ ಕಾಲ ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು.
ಶನಿವಾರ ಅಲಂಕೃತಗೊಂಡ ಅಮ್ಮನವರ ಉತ್ಸವ ಮೂರ್ತಿ ಬನ್ನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಆಗಮಿಸಿತು. ಕೊನೆಯಲ್ಲಿ ಉತ್ಸವ ಮೂರ್ತಿಯನ್ನು ಬರಮಾಡಿಕೊಂಡು ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಯೋಗದೊಂದಿಗೆ ಸಂಪನ್ನಗೊಳಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಕಾಶಿನಾಥ್ ಹಾಗು ವಿಜಯಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ ಹಾಗು ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ಶ್ರೀ ಕರುಮಾರಿಯಮ್ಮ ದೇವಸ್ಥಾನದಲ್ಲಿ ನಾಡಹಬ್ಬ ದಸರಾ ಉತ್ಸವ ಕಡೆ ದಿನ ಅಮ್ಮನವರಿಗೆ ಚಾಮುಂಡೇರಿಶ್ವರಿ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ಉತ್ಸವ ಮೆರವಣಿಗೆ ನಡೆಸಿ ಸಂಪನ್ನಗೊಳಿಸಲಾಯಿತು.
No comments:
Post a Comment