Tuesday, October 15, 2024

ಸರ್ಕಾರಿ ನೌಕರರ ಸಂಘದ ಚುನಾವಣೆ : ೯ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಛೇರಿ. 
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ೨೦೨೪-೨೯ನೇ ಸಾಲಿನ ಕಾರ್ಯಕಾರಿ ಸಮಿತಿ ಚುನಾವಣೆ ನಡೆಯುತ್ತಿದ್ದು, ವಿವಿಧ ಮತ ಕ್ಷೇತ್ರಗಳಿಂದ ಒಟ್ಟು ೯ ಅಭ್ಯರ್ಥಿಗಳು ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. 
    ಪಶುಪಾಲನಾ ಮತ್ತು ವೈದ್ಯ ಸೇವಾ ಇಲಾಖೆಯಿಂದ ಆನವೇರಿ ಪಶು ಚಿಕಿತ್ಸಾಲಯದ ಡಾ. ಸಿ.ಬಿ ರಮೇಶ್, ಸರ್ಕಾರಿ ಪ್ರಾಥಮಿಕ ಶಾಲೆಯಿಂದ ತಾಲೂಕಿನ ತಳ್ಳಿಕಟ್ಟೆ ನಾಗತಿಬೆಳಗಲು ತಾಂಡ ಸ.ಕಿ.ಪ್ರಾ.ಶಾಲೆಯ ಎಚ್.ಎನ್ ನರಸಿಂಹಮೂರ್ತಿ, ಸರ್ಕಾರಿ ಪ್ರೌಢ ಶಾಲೆಯಿಂದ ಹಳೇನಗರ ಸರ್ಕಾರಿ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಬಿ. ಸಿದ್ದಬಸಪ್ಪ, ಸರ್ಕಾರಿ ಪದವಿಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜಿಯಿಂದ ಹಳೇನಗರ ಸರ್ಕಾರಿ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬಿ. ಚನ್ನಯ್ಯ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗು ಅಲ್ಪ ಸಂಖ್ಯಾತರ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಆರ್. ಅಶೋಕ್ ರಾವ್, ಅರಣ್ಯ ಇಲಾಖೆಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯ ಡಿ. ವೆಂಕಟೇಶ್ ಮತ್ತು ವಲಯ ಅರಣ್ಯಾಧಿಕಾರಿಗಳ ಕಛೇರಿಯ ಎಸ್. ಕಾಂತೇಶ್ ನಾಯ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾಲೂಕಿನ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಚ್.ಎಸ್ ಡಾ. ಗಿರೀಶ್ ಹಾಗು ಖಜಾನೆ ಇಲಾಖೆಯಿಂದ ಉಪ ಖಜಾನೆ ಸಹಾಯಕ ನಿರ್ದೇಶಕರ ಕಾರ್ಯಾಲಯದ ಎ.ಸಿ ಮಮತ ನಾಮಪತ್ರ ಸಲ್ಲಿಸಿದ್ದಾರೆಂದು 
    ತಾಲೂಕಿನ ೨೪ ಮತ ಕ್ಷೇತ್ರಗಳಿಂದ ೩೪ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅ.೯ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ೧೮ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ೧೯ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ೨೧ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದಲ್ಲಿ ೨೮ರಂದು ಚುನಾವಣೆ ನಡೆಯಲಿದೆ. ಸಹಾಯಕ ಚುನಾವಣಾಧಿಕಾರಿಯಾಗಿ ಕಂದಾಯ ಇಲಾಖೆ ನಿವೃತ್ತ ನೌಕರ ಎಲ್.ಸಿ ಶಂಕರ್ ಜೋಯಿಸ್ ಕರ್ತವ್ಯ ನಿರ್ವಹಿಸಲಿದ್ದು, ಅಲ್ಲದೆ ಇದೆ ಮತ ಎಣಿಕೆ ನಡೆದು ಫಲಿತಾಂಶ ಸಹ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿಯಾಗಿರುವ ನಿವೃತ್ತ ಉಪ ತಹಸೀಲ್ದಾರ್ ಬಿ.ಎಸ್ ಮೈಲಾರಯ್ಯ ತಿಳಿಸಿದ್ದಾರೆ. 

No comments:

Post a Comment