Monday, October 28, 2024

ಸರ್ಕಾರಿ ನೌಕರರ ಸಂಘದ ಚುನಾವಣೆ : ಹಾಲಿ ಅಧ್ಯಕ್ಷ ಬಿ. ಸಿದ್ದಬಸಪ್ಪ ಗೆಲುವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಮತದಾನ ಸೋಮವಾರ ಭದ್ರಾವತಿ ಹಳೇನಗರದ ಕನಕಮಂಟಪ ಸಮೀಪದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠ ಶಾಲೆಯಲ್ಲಿ ನಡೆಯಿತು. 
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಮತದಾನ ಸೋಮವಾರ ಹಳೇನಗರದ ಕನಕಮಂಟಪ ಸಮೀಪದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠ ಶಾಲೆಯಲ್ಲಿ ನಡೆಯಿತು. 
    ಈಗಾಗಲೇ ಕಾರ್ಯಕಾರಿ ಸಮಿತಿಗೆ ಬಹುತೇಕ ಮಂದಿ ವಿವಿಧ ಮತ ಕ್ಷೇತ್ರಗಳಿಂದ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಕೆಲವು ಮತ ಕ್ಷೇತ್ರಗಳಿಗೆ ಮತದಾನ ನಡೆಯಿತು. ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡು ಬಂದಿತು. 
    ತಾಲೂಕು ಸರ್ಕಾರಿ ನೌಕರರ ಸಂಘದ ಹಾಲಿ ಅಧ್ಯಕ್ಷ ಬಿ. ಸಿದ್ದಬಸಪ್ಪ ಈ ಬಾರಿ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದಾರೆ. ಪ್ರೌಢಶಾಲೆ ಮತ ಕ್ಷೇತ್ರದ ೧ ಸ್ಥಾನಕ್ಕೆ ವಿ. ಮೋತಿನಾಯ್ಕ, ಜಿ. ಶಿವಾನಾಯ್ಕ ಮತ್ತು ಬಿ. ಸಿದ್ದಬಸಪ್ಪ ಸ್ಪರ್ಧಿಸಿದ್ದು, ಒಟ್ಟು ೩೦೦ ಮತಗಳ ಪೈಕಿ ೧೭೦ ಮತಗಳ ಚಲಾವಣೆಗೊಂಡಿವೆ. ಈ ಪೈಕಿ ಬಿ. ಸಿದ್ದಬಸಪ್ಪ-೧೮೬ ಅತಿಹೆಚ್ಚು, ವಿ. ಮೋತಿನಾಯ್ಕ-೪೭ ಹಾಗು ಜಿ. ಶಿವಾನಾಯ್ಕ-೩೭ ಮತಗಳನ್ನು ಪಡೆದುಕೊಂಡಿದ್ದಾರೆ
    ಸರ್ಕಾರಿ ಪ್ರಾಥಮಿಕ ಶಾಲೆಗಳು ಮತಕ್ಷೇತ್ರದ ಒಟ್ಟು ೩ ಸ್ಥಾನಗಳಿಗೆ ಜೇನಮ್ಮ, ಎಸ್. ನಾಗರತ್ನಮ್ಮ, ಯು. ಮಹಾದೇವಪ್ಪ, ಮುಕ್ತಿಯಾರ್ ಅಹಮದ್, ಎಸ್.ಕೆ ಮೋಹನ್, ರಮೇಶ್ ನಾಯ್ಕ, ಎ. ರಂಗನಾಥ, ವೈ.ಎನ್ ಶಶಿಧರಗೌಡ ಮತ್ತು ಎಚ್.ಎಸ್ ಸುಮಾ ಸ್ಪರ್ಧಿಸಿದ್ದು, ಒಟ್ಟು ೮೨೧ ಮತಗಳ ಪೈಕಿ ೭೯೫ ಮತಗಳು ಚಲಾವಣೆಗೊಂಡಿವೆ. ಶೇ.೯೭ರಷ್ಟು ಮತದಾನ ನಡೆದಿದ್ದು, ಈ ಪೈಕಿ ಎಸ್.ಕೆ ಮೋಹನ್-೬೨೨, ವೈ.ಎನ್ ಶ್ರೀಧರ್ ಗೌಡ-೫೬೬ ಮತ್ತು ಎ. ರಂಗನಾಥ-೫೩೧ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 

No comments:

Post a Comment