Tuesday, October 8, 2024

ನಾಡಹಬ್ಬ ದಸರಾ ಕಬಡ್ಡಿ ಪಂದ್ಯಾವಳಿ : ಸೊರಬ ತಂಡ ಪ್ರಥಮ, ಬಿವೈಕೆ ದ್ವಿತೀಯ ಬಹುಮಾನ

ನಾಡಹಬ್ಬ ದಸರಾ ಅಂಗವಾಗಿ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಸೊರಬ ತಾಲೂಕಿನ ಕಬಡ್ಡಿ ತಂಡ ಮೊದಲ ಬಹುಮಾನ ಪಡೆದುಕೊಂಡಿದೆ. 
    ಭದ್ರಾವತಿ: ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಸೊರಬ ತಾಲೂಕಿನ ಕಬಡ್ಡಿ ತಂಡ ಮೊದಲ ಬಹುಮಾನ ಪಡೆದುಕೊಂಡಿದೆ. 
    ನಗರದ ಬಿವೈಕೆ ತಂಡ ಎರಡನೇ ಬಹುಮಾನ ಪಡೆದುಕೊಂಡಿದ್ದು, ಮೊದಲನೇ ಬಹುಮಾನ ಪಡೆದುಕೊಂಡ ಸೊರಬ ತಂಡ ೨೦ ಸಾವಿರ ರು. ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ಮತ್ತು ಎರಡನೇ ಬಹುಮಾನ ಪಡೆದ ಬಿವೈಕೆ ತಂಡ ೧೫ ಸಾವಿರ ರು. ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ತಮ್ಮದಾಗಿಸಿಕೊಂಡಿವೆ. ಅತ್ಯುತ್ತಮ ಆಟಗಾರರಾದ ಓಂಪ್ರಕಾಶ್ ಹಾಗೂ ಮಂಜುನಾಯ್ಕ್‌ರವರಿಗೆ ವೈಯಕ್ತಿಕವಾಗಿ ಪ್ರೋತ್ಸಾಹಧನ ನೀಡಲಾಯಿತು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭೆ ಸದಸ್ಯರು, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಮುಖಂಡರಾದ ಎಸ್. ಕುಮಾರ್, ಬದರಿನಾರಾಯಣ, ಎಸ್.ಎಸ್ ಭೈರಪ್ಪ, ಮೋಹನ್ ಪಳನಿ, ಹಿರಿಯ ಕಬಡ್ಡಿ ಕ್ರೀಡಾಪಟುಗಳಾದ ರಂಗನಾಥ್, ಸಿದ್ದಯ್ಯ ಸೇರಿದಂತೆ ಇನ್ನಿತರರು ಬಹುಮಾನ ವಿತರಿಸಿದರು.  

No comments:

Post a Comment