Wednesday, October 16, 2024

ವಿಐಎಸ್‌ಎಲ್‌ನಲ್ಲಿ ಜಾಗೃತಾ ತಿಳುವಳಿಕೆ ಸಪ್ತಾಹ : ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ  ಅ.೨೮ ರಿಂದ ನ.೩ರ ವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ-2024ರ ಅಂಗವಾಗಿ `ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ' ಎಂಬ ವಿಷಯದೊಂದಿಗೆ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ  ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
    `ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ' ವಿಷಯ ಕುರಿತು ಪ್ರಬಂಧ, ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳು ಜರುಗಲಿದ್ದು, 23 ರಂದು ಬೆಳಿಗ್ಗೆ 9.30 ರಿಂದ 11.30ರ ವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ 2 ವಿಭಾಗಗಳಲ್ಲಿ 5 ರಿಂದ 7ನೇ ತರಗತಿ ಮತ್ತು 8 ರಿಂದ 10ನೇ ತರಗತಿವರೆಗೆ ಹಾಗು 11.30 ರಿಂದ 1 ಗಂಟೆವರೆಗೆ 8 ರಿಂದ 10ನೇ ತರಗತಿ  ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಬರೆಯುವ ಸ್ಪರ್ಧೆ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿವೆ. 
    25ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30ರವರೆಗೆ 8 ರಿಂದ 10ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಭಾಷಣ ಸ್ಪರ್ಧೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ 8 ರಿಂದ 10ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿ ಭಾಷಣ ಸ್ಪರ್ಧೆ ಹಾಗು 26ರಂದು ಬೆಳಿಗ್ಗೆ 9.45ಕ್ಕೆ  8 ರಿಂದ 10ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಷ್ಟಾಚಾರ ವಿರೋಧಿ ಚಳುವಳಿಗಳು. ಅಥವಾ  ಭಷ್ಟಾಚಾರ ವಿರೋಧಿ ಹೋರಾಟದ ಏಜೆನ್ಸಿಗಳು, ಕಾನೂನುಗಳು ಮತ್ತು ನಿಯಮಗಳು. ಅಥವಾ ಭಷ್ಟಾಚಾರ ವಿರೋಧಿ ಹೋರಾಟದ ತಂತ್ರಜ್ಞಾನಗಳು. ಅಥವಾ ನೈತಿಕ ಮೌಲ್ಯಗಳು, ಸಾಮಾನ್ಯ ಜಾಗೃತಿಗಳು, ಸಾಮಾನ್ಯ ಜ್ಞಾನ, ಪ್ರಚಲಿತ ವಿಧ್ಯಮಾನ ಮತ್ತು ಇತ್ಯಾದಿಗಳ ಕುರಿತು ರಸಪ್ರಶ್ನೆ ಸ್ಪರ್ಧೆ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನಡೆಯಲಿವೆ. 
    ಚಿತ್ರಬರೆಯುವ ಮತ್ತು ಪ್ರಬಂಧ ಸ್ಪರ್ಧೆಗಳಿಗೆ ಪ್ರತಿ ಶಾಲೆಯಿಂದ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ ಇರುವುದಿಲ್ಲ. ಕನ್ನಡ, ಆಂಗ್ಲ ಮತ್ತು ಹಿಂದಿ ಭಾಷಣ ಸ್ಪರ್ಧೆಗೆ ಪ್ರತಿ ಶಾಲೆಯಿಂದ ಪ್ರತಿ ಭಾಷೆಯಲ್ಲಿ ಭಾಗವಹಿಸಲು ಗರಿಷ್ಠ 2 ಸ್ಪರ್ಧಿಗಳನ್ನು ಕಳುಹಿಸತಕ್ಕದ್ದು. ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತಿ ಶಾಲೆಯಿಂದ ಗರಿಷ್ಠ ಒಂದು ತಂಡದಲ್ಲಿ 2 ಸ್ಪರ್ಧಿಗಳಿರುವ 2 ತಂಡಗಳಳನ್ನು ಕಳುಹಿಸತಕ್ಕದ್ದು. ಪ್ರತಿ ಸ್ಪರ್ಧೆಯಲ್ಲಿ ೩ ಬಹುಮಾನಗಳಿದ್ದು, ಬಹುಮಾನ ವಿತರಣಾ ಸಮಾರಂಭವು ನ. 4ರ ಮಧ್ಯಾಹ್ನ 2 ಗಂಟೆಗೆ ಶ್ರೀ ಶಾರದಾ ಮಂದಿರ, ನ್ಯೂಟೌನ್, ಭದ್ರಾವತಿಯಲ್ಲಿ ನಡೆಯಲಿರುವ ಜಾಗೃತ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ 9480829018/9480829211/9480829137  ಸಂಪರ್ಕಿಸಬಹುದಾಗಿದೆ. 

No comments:

Post a Comment