Monday, October 7, 2024

ಗಾಂಜಾ ಸೇವೆನೆ : ಪ್ರಕರಣ ದಾಖಲು

 ಸಾಂದರ್ಬಿಕ  ಚಿತ್ರ
    ಭದ್ರಾವತಿ: ನಗರದ ತರೀಕೆರೆ ರಸ್ತೆ ಗಾಂಧಿ ವೃತ್ತದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
    ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೆ. ಚಂದ್ರಶೇಖರ್‌ರವರು ಅ.೫ರಂದು ರಾತ್ರಿ ೭ರ ಸಮಯದಲ್ಲಿ ಗಸ್ತಿನಲ್ಲಿದ್ದಾಗ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಆತನನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

No comments:

Post a Comment