ಶಿವಮೊಗ್ಗ ಇಡುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗು ಕೃಷಿ ಮಹಾವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗ ಸಹಯೋಗದೊಂದಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳಿಂದ ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದ ಅನುಗೌಡರವರ ತೋಟದಲ್ಲಿ ಮಣ್ಣು ಮಾದರಿ ಸಂಗ್ರಹ ವಿಧಾನದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.
ಭದ್ರಾವತಿ: ಶಿವಮೊಗ್ಗ ಇಡುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗು ಕೃಷಿ ಮಹಾವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗ ಸಹಯೋಗದೊಂದಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳಿಂದ ಉಕ್ಕುಂದ ಗ್ರಾಮದ ಅನುಗೌಡರವರ ತೋಟದಲ್ಲಿ ಮಣ್ಣು ಮಾದರಿ ಸಂಗ್ರಹ ವಿಧಾನದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.
ಮಣ್ಣು ಪರೀಕ್ಷೆಯ ಪ್ರಾಮುಖ್ಯತೆ, ಮಣ್ಣು ಮಾದರಿ ಸಂಗ್ರಹಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಮಣ್ಣು ಮಾದರಿ ಸಂಗ್ರಹ ಮಾಡುವ ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಯಿತು.
ಎಲ್ಲಾ ಬೆಳೆಗೂ ಶಿಫಾರಸ್ಸು ಮಾಡಿದ ಗೊಬ್ಬರದ ಪ್ರಮಾಣ ಒಂದೇ ರೀತಿ ಇರದ ಕಾರಣ ಮಣ್ಣು ಪರೀಕ್ಷೆ ಮಾಡಿಸಿ, ಮಣ್ಣಿನ ಫಲವತ್ತತೆಯ ಆಧಾರದ ಮೇಲೆ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿ ಎಷ್ಟು ಗೊಬ್ಬರ ಕೊಡಬೇಕೆಂದು ತಿಳಿದು ಬರುತ್ತದೆ. ಕೆಲವೊಂದು ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮಣ್ಣಲ್ಲಿ ಸಿಗುತ್ತವೆ. ಅಂತಹ ಪೋಷಕಾಂಶಗಳನ್ನು ಮತ್ತೆ ಸೇರಿಸುವುದರಿಂದ ಹೆಚ್ಚಿನ ಗೊಬ್ಬರ ಹಾಕಿದಂತೆ ಆಗುತ್ತದೆ. ಹಣವು ವ್ಯರ್ಥವಾಗುತ್ತದೆ. ಈ ಹಿನ್ನಲೆಯಲ್ಲಿ ಮಣ್ಣಿನ ಫಲವತ್ತತೆ, ಇಳುವರಿ ಮತ್ತು ಆರ್ಥಿಕ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚು ರಾಸಾಯನಿಕ ಗೊಬ್ಬರ ಕೊಡುವುದಕ್ಕೂ ಮುಂಚೆ ಮಣ್ಣು ಪರೀಕ್ಷೆ ಮಾಡಿಸುವುದು ಮುಖ್ಯ ಎಂದು ಮಾಹಿತಿ ನೀಡಲಾಯಿತು.
No comments:
Post a Comment