Thursday, November 14, 2024

ಬಾಲ್ಯದಲ್ಲಿಯೇ ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮಾನಸಿಕ, ದೈಹಿಕವಾಗಿ ಸದೃಢರಾಗಿ : ಜೆ.ಎನ್ ಬಸವರಾಜಪ್ಪ


ಭದ್ರಾವತಿ ನಗರದ ಹೊಸಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ೧೩೫ನೇ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ಮಕ್ಕಳು ಬಾಲ್ಯದಲ್ಲಿಯೇ ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿರಬೇಕೆಂದು ನಗರದ ಹಿರಿಯ ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಹೇಳಿದರು. 
  ಅವರು ಗುರುವಾರ ನಗರದ ಹೊಸಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ೧೩೫ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಕ್ಕಳ ಮನಸ್ಸು ಪರಿಶುದ್ಧವಾಗಿರಬೇಕು. ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ನೆಹರುರವರು ಮಕ್ಕಳ ಮೇಲೆ ಹೊಂದಿರುವ ಪ್ರೀತಿ ಅಪಾರವಾಗಿದ್ದು, ಅವರ ಆಶಯದಂತೆ ಅವರ ಜನ್ಮದಿನ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು. 
    ಶಿಕ್ಷಕಿ ಭಾಗ್ಯ ನೆಹರುರವರ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು. ಮುಖ್ಯ ಶಿಕ್ಷಕ ನಾಗೇಶ್ ನೆಹರುರವರ ಕಾಲಾವಧಿಯಲ್ಲಿ ದೇಶ ಕಂಡ ಪ್ರಗತಿಯ ಕುರಿತು ಮಾತನಾಡಿದರು. 
    ವಿದ್ಯಾರ್ಥಿಗಳಾದ  ಪೂರ್ವಿಕ, ಲಕ್ಷ್ಮಿ ಮತ್ತು ಜಯಶ್ರೀ ಮಕ್ಕಳ ದಿನಾಚರಣೆ ಕುರಿತು ಕಿರು ಭಾಷಣ ಮಾಡಿದರು. ವಿದ್ಯಾರ್ಥಿಗಳಿಂದ ನೃತ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.  ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. 

No comments:

Post a Comment