Wednesday, November 13, 2024

ಕ್ರೈಸ್ತ ಸಮುದಾಯದ ಧರ್ಮೋಪದೇಶ ಶಿಕ್ಷಕಿಯರ ದಿನಾಚರಣೆ

ಭದ್ರಾವತಿ ತಾಲೂಕಿನ ಕಾರೆಹಳ್ಳಿ ಗ್ರಾಮದ ಸಂತ ಅಂತೋಣಿಯವರ ಧರ್ಮ ಕೇಂದ್ರದಲ್ಲಿ ಧರ್ಮೋಪದೇಶ ಶಿಕ್ಷಕರ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆ ಆಚರಿಸಲಾಯಿತು. 
    ಭದ್ರಾವತಿ: ಕ್ರೈಸ್ತ ಸಮುದಾಯದ ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮೋಪದೇಶ ಶಿಕ್ಷಕಿಯರ ದಿನಾಚರಣೆ ಶಿವಮೊಗ್ಗ ಧರ್ಮಕ್ಷೇತ್ರಾದ್ಯಂತ ಎಲ್ಲಾ ಕ್ರೈಸ್ತ ಸಮುದಾಯದ ದೇವಾಲಯಗಳಲ್ಲಿ ಆಚರಿಸಲಾಯಿತು.
    ತಾಲೂಕಿನ ಕಾರೆಹಳ್ಳಿ ಗ್ರಾಮದ ಸಂತ ಅಂತೋಣಿಯವರ ಧರ್ಮ ಕೇಂದ್ರದಲ್ಲಿ ಧರ್ಮೋಪದೇಶ ಶಿಕ್ಷಕರ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಈ ನಿಟ್ಟಿನಲ್ಲಿ ಧರ್ಮೋಪದೇಶ ಶಿಕ್ಷಕಿಯರಿಗೆ ಉಡುಗೊರೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಧರ್ಮ ಕೇಂದ್ರದ ಗುರುಗಳಾದ ಸಂತೋಷ ಅಲ್ಮೇಡ, ಧರ್ಮ ಭಗಿನಿಯರು, ಮಕ್ಕಳು, ಪೋಷಕರು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

No comments:

Post a Comment