Tuesday, November 5, 2024

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಸಹ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. 
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಸಹ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. 
    ಕಾರ್ಖಾನೆ ಆವರಣದಲ್ಲಿರುವ ಆಡಳಿತ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ಎಚ್. ಪ್ರೇಮಬಾಯಿ, ಎನ್. ಗಿರಿಜ, ಯು. ರಮ್ಯ, ಕುಸುಮ, ಮಂಜುನಾಥ್, ಎನ್. ಆಶಾ, ಕೆ. ಲಕ್ಷ್ಮಣ್, ಜಿ. ರವಿಕುಮಾರ್, ಕೆ.ಡಿ ರಕ್ಷಿತ, ಎಸ್.ಎನ್ ಮಂಜುಶ್ರೀ, ಉನ್ನಿಕೃಷ್ಣನ್, ಎ.ಜೆ ಫ್ರಾನ್ಸಿಸ್, ತ್ರಿವೇಣಿ, ಎಂ.ಪಿ ನಾಗೇಂದ್ರಪ್ಪ,  ಡಿ. ಯೋಗೇಶ್ವರಿ, ಜಗದೀಶ್, ಬಿ.ಎಲ್ ಚಂದ್ವಾನಿ, ಎಲ್. ಪ್ರವೀಣ್ ಕುಮಾರ್ ಸೇರಿದಂತೆ ಕಾರ್ಖಾನೆ ಅಧಿಕಾರಿಗಳು, ನೌಕರರು ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಹಾಡುಗಳನ್ನು ಹಾಡುವ ಮೂಲಕ ಸಂಭ್ರಮಿಸಿದರು.
    ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್), ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ್ಷ ಪಾರ್ಥಸಾರಥಿ ಮಿಶ್ರಾ,  ಮಹಾಪ್ರಬಂಧಕ(ಪರಿಸರ ನಿರ್ವಹಣಾ ವಿಭಾಗ) ಎಂ. ಸುಬ್ಬರಾವ್,  ಮಹಾಪ್ರಬಂಧಕರು (ಹಣಕಾಸು) ಶೋಭ ಶಿವಶಂಕರನ್, ಮಹಾಪ್ರಬಂಧಕರು(ಮಾರುಕಟ್ಟೆ) ಹರಿಕೃಷ್ಣ ಗುಡೆ, ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಉಪ ಪ್ರಬಂಧಕರು (ಹೆಚ್.ಆರ್) ಕೆ.ಎಸ್. ಶೋಭ ನಿರೂಪಿಸಿದರು. ನಾಡಿನ ಪರಂಪರೆ ಹಾಗು ಸಾಧಕರ ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಯಿತು. 

No comments:

Post a Comment