Sunday, November 17, 2024

ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಎಸ್. ಮಂಜುನಾಥ್ ನೇಮಕ

ಭದ್ರಾವತಿ ಜನ್ನಾಪುರ ನಿವಾಸಿ, ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ ಎಸ್. ಮಂಜುನಾಥ್‌ರವರನ್ನು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಕಗೊಳಿಸಲಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಆದೇಶ ಪತ್ರ ವಿತರಿಸಿದರು. 
    ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಮಾದಿಗ ಸಮಾಜ(ಕೆಆರ್‌ಎಂಎಸ್) ರಾಜ್ಯಾಧ್ಯಕ್ಷ ಎಸ್. ಮಂಜುನಾಥ್‌ರವರನ್ನು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಕಗೊಳಿಸಲಾಗಿದೆ.  
     ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಹಾಗು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ದೇಶನದಂತೆ  ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನ ಮಂಜುನಾಥ್‌ರವರನ್ನು ನೇಮಕಗೊಳಿಸಿದ್ದಾರೆ. 
     ಜಿಲ್ಲಾ ವ್ಯಾಪ್ತಿಯಲ್ಲಿ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು ಹಾಗು ಪಕ್ಷದ ಮುಖಂಡರ ಸಹಕಾರದೊಂದಿಗೆ ಜಿಲ್ಲಾ ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪರಿಶಿಷ್ಟಜಾತಿ ಸಮುದಾಯದ ಎಲ್ಲಾ ಜನಾಂಗದ ಜನರನ್ನು ಗುರುತಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಕೋರಲಾಗಿದೆ.  ಆದೇಶ ಪತ್ರವನ್ನು ಭಾನುವಾರ ಶಾಸಕರ ಗೃಹ ಕಛೇರಿಯಲ್ಲಿ ಎಸ್. ಮಂಜುನಾಥ್‌ರವರಿಗೆ ನೀಡಿ ಅಭಿನಂದಿಸಲಾಯಿತು. 

No comments:

Post a Comment