Sunday, November 3, 2024

ಹಿರಿಯ ಪತ್ರಕರ್ತ ಕಣ್ಣಪ್ಪರಿಗೆ ಬಿಜೆಪಿ ಪಕ್ಷದಿಂದ ಸನ್ಮಾನ

ಅಲ್ ಇಂಡಿಯಾ ಮೊದಲಿಯಾರ್ ಸಂಘದ ನೂತನ ಅಧ್ಯಕ್ಷರಾದ ಭದ್ರಾವತಿ ನಗರದ ಹಿರಿಯ ಪತ್ರಕರ್ತ ಕಣ್ಣಪ್ಪರವರನ್ನು ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ: ಅಲ್ ಇಂಡಿಯಾ ಮೊದಲಿಯಾರ್ ಸಂಘದ ನೂತನ ಅಧ್ಯಕ್ಷರಾದ ನಗರದ ಹಿರಿಯ ಪತ್ರಕರ್ತ ಕಣ್ಣಪ್ಪರವರನ್ನು ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಕಣ್ಣಪ್ಪರವರು ತಾಲೂಕು ತಮಿಳು ಸಂಘ ಹಾಗು ಮೊದಲಿಯಾರ್ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ತಾಲೂಕು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ, ಲಾರಿ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮೊದಲಿಯಾರ್ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 
    ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕ ಎಸ್. ದತ್ತತ್ರಿ ಕಣ್ಣಪ್ಪರವರಿಗೆ ಉನ್ನತ ಮಟ್ಟದಲ್ಲಿ ಸಂಘದ ಜವಾಬ್ದಾರಿ ವಹಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಅವರನ್ನು ಪಕ್ಷದ ವತಿಯಿಂದ ಸನ್ಮಾನಿಸುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದರು. 
    ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ, ಮಂಗೋಟೆ ರುದ್ರೇಶ್, ಜಿ. ಆನಂದ ಕುಮಾರ್, ಎಂ.ಮಂಜುನಾಥ್, ಎಚ್. ತೀರ್ಥಯ್ಯ, ಬಿ.ಕೆ ಶ್ರೀನಾಥ್, ಅಣ್ಣಪ್ಪ, ಚನ್ನೆಶ್, ರಾಜಶೇಖರ್ ಉಪ್ಪಾರ, ಅವಿನಾಶ್, ಪಿ.ಜಿ ರಾಮಲಿಂಗಯ್ಯ, ಕಾ.ರಾ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

No comments:

Post a Comment