ಕೆ. ರವೀಂದ್ರ ಘೋಡ್ಕೆ
ಭದ್ರಾವತಿ: ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಇಂಜಿನಿಯರ್ ಕೆ. ರವೀಂದ್ರ ಘೋಡ್ಕೆ(೬೪) ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.
ಪತ್ನಿ, ಪುತ್ರಿ ಹಾಗು ಸಹೋದರರು ಇದ್ದಾರೆ. ಇವರು ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಂಪಿಎಂ ಕಾರ್ಖಾನೆ ಸಿವಿಲ್ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ನೆರವೇರಿತು. ಕಾರ್ಮಿಕ ವರ್ಗದವರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
No comments:
Post a Comment