Friday, November 22, 2024

೧೦೦ ದಿನ ಪೂರೈಸಿದ ನಿರ್ಗತಿಕರಿಗೆ ಉಚಿತ ಉಪಾಹಾರ ಸೇವಾ ಕಾರ್ಯ


ಭದ್ರಾವತಿ ನಗರದ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ನಿರ್ಗತಿಕರಿಗೆ ಬೆಳಗಿನ ಉಚಿತ ಉಪಾಹಾರ ವಿತರಿಸುವ ಸೇವಾ ಕಾರ್ಯ ನಡೆಸಿಕೊಂಡು ಬರಲಾಗುತ್ತಿದ್ದು, ಶನಿವಾರ ೧೦೦ನೇ ದಿನ ಪೂರೈಸಿದೆ.
    ಭದ್ರಾವತಿ : ನಗರದ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ನಿರ್ಗತಿಕರಿಗೆ ಬೆಳಗಿನ ಉಚಿತ ಉಪಾಹಾರ ವಿತರಿಸುವ ಸೇವಾ ಕಾರ್ಯ ನಡೆಸಿಕೊಂಡು ಬರಲಾಗುತ್ತಿದ್ದು, ಶನಿವಾರ ೧೦೦ನೇ ದಿನ ಪೂರೈಸಿದೆ.
    ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ತಮಿಳು ಯೂತ್ಸ್ ಅಸೋಸಿಯೇಷನ್ ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದು, ವಿಶೇಷವಾಗಿ ೧೦೦ನೇ ದಿನದ ಅಂಗವಾಗಿ ಬೆಳಿಗ್ಗೆ ರಂಗಪ್ಪ ವೃತ್ತದಲ್ಲಿ ಉಚಿತ ಉಪಾಹಾರ ವಿತರಣೆ ಮಾಡಲಾಯಿತು. 
    ತಮಿಳು ಯೂತ್ಸ್ ಅಸೋಸಿಯೇಷನ್ ಸೇವಾ ಕಾರ್ಯಕ್ಕೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತಿದ್ದು, ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

No comments:

Post a Comment