ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬಿ. ಸಿದ್ದಬಸಪ್ಪ ಪುನರ್ ಆಯ್ಕೆಯಾಗಿದ್ದಾರೆ.
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬಿ. ಸಿದ್ದಬಸಪ್ಪ ಪುನರ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ. ಸಿದ್ದಬಸಪ್ಪರವರು ೨೨ ಹಾಗು ಡಾ. ಗಿರೀಶ್ ೧೧ ಮತಗಳನ್ನು ಪಡೆದುಕೊಂಡಿದ್ದು, ಸಿದ್ದಬಸಪ್ಪ ಗೆಲುವು ಸಾಧಿಸಿದ್ದಾರೆ. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಶಾಂತ್ ೨೨ ಮತ್ತು ವೆಂಕಟೇಶ್ವರಪ್ಪ ೧೨ ಮತಗಳನ್ನು ಪಡೆದುಕೊಂಡಿದ್ದು, ಪ್ರಶಾಂತ್ ಗೆಲುವು ಸಾಧಿಸಿದ್ದಾರೆ. ಉಳಿದಂತೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಸ್ಪರ್ಧಿಸಿದ್ದ ವೆಂಕಟೇಶ್ ೧೯ ಹಾಗು ರಾಜಕುಮಾರ್ ೧೫ ಮತಗಳನ್ನು ಪಡೆದುಕೊಂಡಿದ್ದು, ವೆಂಕಟೇಶ್ ಗೆಲುವು ಸಾಧಿಸಿದ್ದಾರೆ.
No comments:
Post a Comment