Tuesday, November 26, 2024

ಯೋಗ ಶಿಕ್ಷಕ ಡಿ. ನಾಗರಾಜ್‌ಗೆ ಪ್ರೋತ್ಸಾಹ ಧನ

ಭದ್ರಾವತಿ  ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.  
    ಭದ್ರಾವತಿ :  ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.  
    ಡಿ. ನಾಗರಾಜ್‌ರವರು ಸುಮಾರು ೪ ದಶಕಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಹಾಗು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ, ಬಿರುದುಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರನ್ನು ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಇವರ ಸಾಧನೆಯನ್ನು ಪ್ರಶಂಸಿಸಿ ನಗರಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಲಾಯಿತು. 
    ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಕಾಂಗ್ರೆಸ್ ಹಿಂದುಳಿದ ವಿಭಾಗಗಳ ತಾಲೂಕು ಅಧ್ಯಕ್ಷ  ಬಿ. ಗಂಗಾಧರ್, ನಗರಸಭೆ ಹಿರಿಯ ಸದಸ್ಯ ವಿ.ಕದಿರೇಶ್ ಉಪಸ್ಥಿತರಿದ್ದರು.

No comments:

Post a Comment