Tuesday, November 12, 2024

ಕಾಡು ಪ್ರಾಣಿ ಕಡವೆ ಭೇಟೆ : ಓರ್ವನ ಸೆರೆ

ಕಾಡು ಪ್ರಾಣಿ ಕಡವೆ  ಭೇಟೆಯಾಡಿದ ವ್ಯಕ್ತಿಯೋರ್ವನನ್ನು ಭದ್ರಾವತಿ ಉಪವಲಯ ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ. 
    ಭದ್ರಾವತಿ: ಕಾಡು ಪ್ರಾಣಿ ಕಡವೆ  ಭೇಟೆಯಾಡಿದ ವ್ಯಕ್ತಿಯೋರ್ವನನ್ನು ಇಲ್ಲಿನ ಉಪವಲಯ ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ. 
    ಒಟ್ಟು ೪ ಜನರ ತಂಡ ಕಾಡು ಪ್ರಾಣಿ ಕಡವೆ ಭೇಟೆಯಾಡಿದ್ದು, ಈ ಪೈಕಿ ತಾಲೂಕಿನ ಅರೆಬಿಳಚಿ ಕ್ಯಾಂಪ್ ನಿವಾಸಿ ಮಂಜುನಾಥ್‌ನನ್ನು ಬಂಧಿಸಲಾಗಿದೆ. ಉಳಿದ ಮೂವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. 
  ತಾಲೂಕಿನ ದಾನವಾಡಿ ಅರಣ್ಯದಲ್ಲಿ ಮಂಜುನಾಥ್ ಸೇರಿದಂತೆ ನಾಲ್ವರು ಕಡವೆ ಭೇಟೆಯಾಗಿದ್ದು, ಈ ಸಂಬಂಧ ಮಂಜುನಾಥ್‌ನನ್ನು ಬಂಧಿಸುವಲ್ಲಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಯಶಸ್ವಿಯಾಗಿದೆ. ಉಳಿದ ಮೂವರು ತಲೆ ಮರೆಸಿಕೊಂಡಿದ್ದು, ಪತ್ತೆಗಾಗಿ ಬಲೆ ಬೀಸಲಾಗಿದೆ. 
    ಕೂಡ್ಲಿಗೆರೆ ಶಾಖೆಯ ಹೊಸೂರು ಗ್ರಾಮದ ಸರ್ವೆ ನಂ.೨೨ರ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿ ಕಡವೆ ಬೇಟೆಯಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.  
    ಈ ಹಿನ್ನಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ, ಚನ್ನಗಿರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರತ್ನಪ್ರಭ ಇವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿಗಳಾದ ಬಿ.ಎಚ್ ದುಗ್ಗಪ್ಪ ರವರ ನೇತೃತ್ವದ ತಂಡ ರಚಿಸಲಾಗಿತ್ತು.  
    ಉಪ ವಲಯ ಅರಣ್ಯಾಧಿಕಾರಿಗಳಾದ ಶೇಖರ್ ಎ ಚೌಗುಲೆ(ಕೂಡ್ಲಿಗೆರೆ ಶಾಖೆ), ಜಿ. ಹನುಮಂತರಾಯ, ಸಿ. ಚಂದ್ರಶೇಖರ್, ಕಾಂತೇಶ್ ನಾಯ್ಕ, ಗಸ್ತು ಅರಣ್ಯ ಪಾಲಕ ಕೆ.ವಿ ಪ್ರತಾಪ್ ಹಾಗೂ ದಿನಗೂಲಿ ನೌಕರರಾದ ಕೋಠಿ, ಅವಿನಾಶ್ ಮತ್ತು ಮಂಜು ಕಾರ್ಯಾಚರಣೆ ತಂಡದಲ್ಲಿ ಪಾಲ್ಗೊಂಡಿದ್ದರು. ಬಂಧಿತ ಮಂಜುನಾಥ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

No comments:

Post a Comment