ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ೧ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕಿರಣ್ ಗೆಲುವು ಸಾಧಿಸಿದ್ದಾರೆ.
ಭದ್ರಾವತಿ : ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ೧ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕಿರಣ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಸದಸ್ಯರಾಗಿದ್ದ ಗೋಪಾಲ್ ಬರ್ಗೆ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಒಟ್ಟು ೪ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನ.೨೩ರಂದು ಮತದಾನ ನಡೆದಿದ್ದು, ಸೋಮವಾರ ಎಣಿಕೆ ನಡೆಯಿತು. ಕಿರಣ್ ೨೧೭ ಮತಗಳನ್ನು ಪಡೆದುಕೊಂಡಿದ್ದು, ಒಟ್ಟು ೧೧೭೦ ಮತಗಳಲ್ಲಿ ೮೨೬ ಮತಗಳು ಚಲಾವಣೆಯಾಗಿದ್ದವು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಿರಣ್ರವರನ್ನು ಯುವ ಮುಖಂಡ ಬಿ.ಎಸ್ ಬಸವೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.
No comments:
Post a Comment