Saturday, November 16, 2024

ವಾಹನ ಸವಾರರನ್ನು ಅಡ್ಡಗಟ್ಟಿ ನಗದು, ಚಿನ್ನಾಭರಣ ದರೋಡೆ



    ಭದ್ರಾವತಿ: ನಗರದಲ್ಲಿ ಇತ್ತೀಚೆಗೆ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೋಗುತ್ತಿದ್ದ ಸವಾರನ್ನು ಅಡ್ಡಗಟ್ಟಿ ಬೆದರಿಸಿ ನಗದು, ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ.   
    ಕಳೆದ ೩ ದಿನಗಳ ಹಿಂದೆ ನಗರಸಭೆ ವ್ಯಾಪ್ತಿಯ ಕಡದಕಟ್ಟೆ ನಿವಾಸಿ ಸಿ. ವೆಂಕಟೇಶ್ ಎಂಬುವರು ರಾತ್ರಿ ೧೦ ಗಂಟೆ ಸಮಯದಲ್ಲಿ ಬಿ.ಎಚ್ ರಸ್ತೆ, ಭೈರವೇಶ್ವರ ಕಮ್ಯೂನಿಕೇಷನ್ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ತೆಗೆದುಕೊಂಡು ಮನೆಗೆ ಹೊರಟಾಗ ಸುಮಾರು ೨೦ ರಿಂದ ೨೫ ವರ್ಷ ವಯಸ್ಸಿನ ೩ ಜನ ಯುವಕರು ದ್ವಿಚಕ್ರ ವಾಹನ ಅಡ್ಡಗಟ್ಟಿ ಕೊರಳಿನಲ್ಲಿದ್ದ ಸುಮಾರು ೨೮ ಗ್ರಾಂ ತೂಕದ ಅಂದಾಜು ೧.೭೫ ರು. ಮೌಲ್ಯದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 
    ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಪದ್ಮೇನಹಳ್ಳಿ ಗ್ರಾಮದ ನಿವಾಸಿ ರಾಕೇಶ್ ಎಂಬುವರು ಸಂಜೆ ೭ ಗಂಟೆ ಸಮಯದಲ್ಲಿ ಪದ್ಮೇನಹಳ್ಳಿ ಗ್ರಾಮಕ್ಕೆ ಹೋಗುತ್ತಿರುವಾಗ ತಡಸ ಗ್ರಾಮದ ಬಳಿ ಸುಮಾರು ೨೫-೩೦ ವಯಸ್ಸಿನ ೩ ಜನ ಯುವಕರು  ಮದ್ಯಪಾನ ಮಾಡುತ್ತಿದ್ದು, ಇವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ  ಜೇಬಿನಲ್ಲಿದ್ದ  ೨ ಸಾವಿರ ರು. ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

No comments:

Post a Comment