ಭದ್ರಾವತಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಬಡ್ತಿ ಹಾಗು ಸೇವಾ ಸೌಲಭ್ಯಗಳ ಈಡೇರಿಕೆಗಾಗಿ ಆಡಳಿತ ಮಂಡಳಿ ಭವನದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಬಡ್ತಿ ಹಾಗು ಸೇವಾ ಸೌಲಭ್ಯಗಳ ಈಡೇರಿಕೆಗಾಗಿ ಆಡಳಿತ ಮಂಡಳಿ ಭವನದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಸಂಘದ ವತಿಯಿಂದ ನೌಕರರ ಬಡ್ತಿ ಹಾಗು ಸೇವಾ ಸೌಲಭ್ಯಗಳಿಗಾಗಿ ನಿರಂತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ವಿಶ್ವವಿದ್ಯಾಲಯ ಬೇಡಿಕೆ ಈಡೇರಿಸುವಲ್ಲಿ ಹೆಚ್ಚಿನ ಆಸಕ್ತಿವಹಿಸಿಲ್ಲ. ಅಲ್ಲದೆ ಸೂಕ್ತ ಪ್ರತಿಕ್ರಿಯೆ ಸಹ ವ್ಯಕ್ತವಾಗುತ್ತಿಲ್ಲ. ಇದರಿಂದಾಗಿ ನೌಕರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಗಲೇ ಈ ಸಂಬಂಧ ಕುಲಾಧಿಪತಿಗಳಾದ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಹಾಗು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು.
ಸಂಘದ ಅಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಅಧ್ಯಾಪಕೇತರ ನೌಕರರು ಪಾಲ್ಗೊಂಡಿದ್ದರು.
No comments:
Post a Comment