Friday, November 22, 2024

ರಾಘವೇಂದ್ರ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಪ್ರತಿವರ್ಷದಂತೆ ಈ ವರ್ಷ ಸಹ ಆಶ್ಲೇಷ ಬಲಿ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. 
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಪ್ರತಿವರ್ಷದಂತೆ ಈ ವರ್ಷ ಸಹ ಆಶ್ಲೇಷ ಬಲಿ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. 
  ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಮತ್ತು ಹೋಮ ಹಾಗೂ ಆಶ್ಲೇಷ ಬಲಿ ಪೂಜೆ ನೆರವೇರಿತು. ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷರಾದ ಸುಮಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ, ಖಜಾಂಚಿ ನಿರಂಜನಾಚಾರ್ಯ, ಶುಭ ಗುರುರಾಜ್, ಸುಪ್ರಿತ ತಂತ್ರಿ, ವಿದ್ಯಾನಂದ ನಾಯಕ ಹಾಗೂ ಗೋಪಾಲ್ ಆಚಾರ್, ಶ್ರೀನಿವಾಸ ಆಚಾರ್, ಸುಧೀಂದ್ರ ಜೆ. ತೀರ್ಥ, ಕೇಶವಮೂರ್ತಿ, ಮಾಧುರಾವ್, ಪ್ರಶಾಂತ್ ಸೇರಿದಂತೆ ಹಳೇನಗರ, ಹೊಸಮನೆ, ನ್ಯೂಟೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.  

No comments:

Post a Comment