ಹನುಮಗೌಡ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಇಂಜಿನಿಯರ್ ಹನುಮಗೌಡ(೭೫) ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಪುತ್ರಿ ಹಾಗು ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ನಗರದ ಲೋಯರ್ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಹನುಮಗೌಡರವರು ವಿಐಎಸ್ಎಲ್ ಕಾರ್ಖಾನೆಯ ಸಿ.ಇ ಪ್ಲಾಂಟ್ನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ನಿಧನಕ್ಕೆ ನಿವೃತ್ತ ಕಾರ್ಮಿಕರ ಸಂಘ ಸಂತಾಪ ಸೂಚಿಸಿದೆ.
No comments:
Post a Comment