Sunday, December 1, 2024

ಫಿಲ್ಟರ್‌ಶೆಡ್ ನಿವಾಸಿಗಳ ಸಂಕಷ್ಟಕ್ಕೆ ಜನಪ್ರತಿನಿಧಿಗಳು ಸ್ಪಂದಿಸಲಿ : ಶಶಿಕುಮಾರ್ ಎಸ್. ಗೌಡ

ಭದ್ರಾವತಿ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ನೇತೃತ್ವವಹಿಸಿ ಮಾತನಾಡಿದರು.
    ಭದ್ರಾವತಿ: ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಬಡ ಜನರು ವಾಸಿಸುತ್ತಿದ್ದು, ಇವರ ಸಂಕಷ್ಟಗಳಿಗೆ ಜನಪ್ರತಿನಿಧಿಗಳು ಸ್ಪಂದಿಸುವ ಮೂಲಕ ನೆರವಿಗೆ ಮುಂದಾಗಬೇಕು. ನ್ಯಾಯಬದ್ಧವಾದ ಹೋರಾಟಗಳಿಗೆ ಎಲ್ಲರೂ ಸಹಕರಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಮನವಿ ಮಾಡಿದರು. 
    ಅವರು ಫಿಲ್ಟರ್‌ಶೆಡ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು. ಫಿಲ್ಟರ್‌ಶೆಡ್‌ನಲ್ಲಿ ಬಡ ಜನರಿಗೆ ಇನ್ನೂ ಹಕ್ಕು ಪತ್ರ ನೀಡಿಲ್ಲ. ಹಲವು ಮೂಲ ಸೌಕರ್ಯಗಳ ಕೊರತೆ ಇದ್ದು, ಕೆಲವು ವರ್ಷಗಳಿಂದ ಅನಧಿಕೃತವಾಗಿ ನಿರ್ಮಿಸಲಾಗಿರುವ ಸಮುದಾಯ ಭವನದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಈ ಹೋರಾಟದ ಹಿಂದೆ ಯಾವುದೇ ದುರುದ್ದೇಶವಿಲ್ಲ. ಸಮುದಾಯ ಭವನ ಫಿಲ್ಟರ್‌ಶೆಡ್ ನಿವಾಸಿಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಸದ್ಬಳಕೆಯಾಗಬೇಕೆಂದರು. 
    ಸ್ಥಳೀಯ ಮುಖಂಡ ಉಮೇಶ್ ಮಾತನಾಡಿ, ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಬಡ ಜನರಿಗೆ ಹಕ್ಕು ಪತ್ರ ನೀಡದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇಲ್ಲಿನ ಜನರ ಹೋರಾಟಕ್ಕೆ ನಮ್ಮ ಬೆಂಬಲವಿದ್ದು, ಅನಧಿಕೃತ ಸಮುದಾಯ ಭವನದ ವಿರುದ್ಧ ನಡೆಯುತ್ತಿರುವ ನ್ಯಾಯಬದ್ಧವಾದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಅಗತ್ಯವಿದೆ ಎಂದರು.  
    ನಗರಸಭೆ ಸದಸ್ಯರಾದ ಸವಿತಾ ಉಮೇಶ್, ನಾಗರತ್ನ ಅನಿಲ್‌ಕುಮಾರ್, ಆರ್. ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಮಾತನಾಡಿದರು. ಸ್ಥಳೀಯ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು. 

No comments:

Post a Comment