ಬ್ರಹ್ಮಲಿಂಗಯ್ಯ
ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕ, ಉಜ್ಜನಿಪುರ ನಿವಾಸಿ ಬ್ರಹ್ಮಲಿಂಗಯ್ಯ(68) ಮಂಗಳವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಸಹೋದರ, ಸಹೋದರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರ ಡಿ. ೧೮ರ ಬುಧವಾರ ಬೆಳಿಗ್ಗೆ ಬೈಪಾಸ್ ರಸ್ತೆ ಸಮೀಪದ ಬಾಳೆಮಾರನಹಳ್ಳಿ-ತಿಮ್ಲಾಪುರ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ.
ಬ್ರಹ್ಮಲಿಂಗಯ್ಯ ಎಂಪಿಎಂ ಕಾರ್ಖಾನೆಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕಾರ್ಖಾನೆಯಲ್ಲಿ ಮಾತ್ರವಲ್ಲದೆ ಹೊರಗೂ ಸಹ ಎಲೆಕ್ಟ್ರಿಕಲ್ ಕೆಲಸಗಳನ್ನು ನಿರ್ವಹಿಸುವ ಮೂಲಕ ಎಲೆಕ್ಟ್ರಿಕಲ್ ಬೊಮ್ಮಣ್ಣ ಎಂದೇ ಹೆಸರುವಾಸಿಯಾಗಿದ್ದರು. ಅಲ್ಲದೆ ಚೇತನ್ ಸೌಂಡ್ಸ್ ಮತ್ತು ಭದ್ರಾವತಿ ಬಾಯ್ಸ್ ಆರ್ಕೆಸ್ಟ್ರಾ ಮಾಲೀಕರಾಗಿದ್ದರು. ಇವರ ನಿಧನಕ್ಕೆ ಎಂಪಿಎಂ ನಿವೃತ್ತ ಕಾರ್ಮಿಕರು, ಭದ್ರಾವತಿ ಗುರು ಆರ್ಟ್ಸ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment