Tuesday, December 31, 2024

ಮಹಿಳೆ ಮಕ್ಕಳಿಗೆ ಉತ್ತಮ ಸಂಸ್ಕಾರ ಹೇಳಿ ಕೊಡುವ ಚೈತನ್ಯ ಹೊಂದಿದ್ದಾಳೆ : ಡಾ. ಧನಂಜಯ ಸರ್ಜಿ

ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ನಡೆದ ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ೬ನೇ ವಾರ್ಷಿಕೋತ್ಸವ ಮತ್ತು ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ವಿಧಾನ ಪರಿಷತ್ ಸದಸ್ಯ, ವೈದ್ಯ ಡಾ. ಧನಂಜಯ ಸರ್ಜಿ ಉಧ್ಘಾಟಿಸಿದರು. 
    ಭದ್ರಾವತಿ : ಇಂದು ಮಹಿಳೆಯರು ಪುರುಷರಷ್ಟೇ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆಯ ಹೊರಗೆ ಪರುಷರು ದುಡಿದರೆ ಮಹಿಳೆಯರು ಮನೆಯಲ್ಲಿ ಸಂಸಾರ ನಿಭಾಯಿಸುವುದಲ್ಲದೆ ಮಕ್ಕಳಿಗೆ ಉತ್ತಮ ಸಂಸ್ಕಾರ ಹೇಳಿ ಕೊಡುವ ಚೈತನ್ಯ ಹೊಂದಿದ್ದಾಳೆ ಎಂದು ವಿಧಾನ ಪರಿಷತ್ ಸದಸ್ಯ, ವೈದ್ಯ ಡಾ. ಧನಂಜಯ ಸರ್ಜಿ ಹೇಳಿದರು.
    ಅವರು ಹಳೇನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ನಡೆದ ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ೬ನೇ ವಾರ್ಷಿಕೋತ್ಸವ ಮತ್ತು ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಉಧ್ಘಾಟಿಸಿ ಮಾತನಾಡಿದರು.
    ಮಹಿಳಾ ಸಮಾಜ ಸಮಾಜಮುಖಿಯಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುವ  ಮೂಲಕ ಮಹಿಳೆಯರ ಸರ್ವತೋಮುಖ ಅಭಿವೃಧ್ಧಿ ಹಾಗು ಅವರ ಪ್ರತಿಭೆಗಳ ಅನಾವರಣಕ್ಕೆ ಸರಿಯಾದ ವೇದಿಕೆ ಕಲ್ಪಿಸಬೇಕು ಎಂದರು. 
    ಮುಖಂಡ ಕೂಡ್ಲಿಗೆರೆ ಹಾಲೇಶ್ ಮಾತನಾಡಿ, ಸಮಾಜ ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ಗ್ರಾಮಾಂತರ ಪ್ರದೇಶದ ಮಹಿಳೆಯರನ್ನು ಸಹ ಒಳಗೊಂಡು ಸಂಘಟನೆ ಮತ್ತಷ್ಟು  ಬಲಿಷ್ಟಗೊಳಿಸಬೇಕು ಎಂದರು.      
    ಆರ್.ಎಸ್ ಶೋಭಾ ಅಧ್ಯಕ್ಷತೆ ವಹಿಸಿದ್ದರು. ನಿಯೋಜಿತ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ, ಪ್ರಧಾನ ಕಾರ್ಯದರ್ಶಿ ಕುಸುಮಾ ತೀರ್ಥಯ್ಯ, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕರಯ್ಯ, ಯಶೋಧ ವೀರಭದ್ರಪ್ಪ, ಮಧು ಪರಮೇಶ್, ಕೆ.ಎಚ್.ತೀರ್ಥಯ್ಯ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾಗಳನ್ನು ವಿತರಿಸಲಾಯಿತು. ಕವಿತಾ ಅಶೋಕ್, ಮಮತ ಪ್ರಕಾಶ್ ಪ್ರಾರ್ಥಿಸಿ. ಗೀತಾ ಡಾ.ಬೆಂಗಳೂರಿ ಸ್ವಾಗತಿಸಿದರು. ಉಷಾ ವೀರಶೇಖರ್ ವಂದಿಸಿದರು. ಯಶೋಧ ಡಾ.ವೀರಭದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.  

No comments:

Post a Comment