Tuesday, December 31, 2024

ಪ್ರಾಮಾಣಿಕತೆ ಜೊತೆಗೆ ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಿ : ಶಂಕರ್ ಅಶ್ವಥ್

ಭದ್ರಾವತಿ ನಗರದ ಅಪ್ಪರ್ ಹುತ್ತಾ ಅನನ್ಯ ಪ್ರೌಢಶಾಲೆ ವಾರ್ಷಿಕೋತ್ಸವ `ಅನನ್ಯೋತ್ಸವ' ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ ಶಂಕರ್ ಅಶ್ವಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ವಿದ್ಯಾರ್ಥಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳುವ ಜೊತೆಗೆ ನಿಸ್ವಾರ್ಥತೆ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಸಮಾಜದ ಸೇವೆಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕೆಂದು ಹಿರಿಯ ಚಲನಚಿತ್ರ ಶಂಕರ್ ಅಶ್ವಥ್ ಹೇಳಿದರು. 
    ನಗರದ ಅಪ್ಪರ್ ಹುತ್ತಾ ಅನನ್ಯ ಪ್ರೌಢಶಾಲೆ ವಾರ್ಷಿಕೋತ್ಸವ `ಅನನ್ಯೋತ್ಸವ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅವರೇ ರಚಿಸಿ, ನಿರ್ದೇಶಿಸಿದ `ನಮ್ಮ ಮೇಷ್ಟ್ರು' ಎಂಬ ಚಲನಚಿತ್ರದ ಕಥೆಯನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವಿನ ಬಾಂದವ್ಯದ ಬಗ್ಗೆ ತಿಳಿಸಿದರು. 
    ಶಂಕರ್ ಅಶ್ವಥ್ ಅವರನ್ನು ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ. ಕೆ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. 
  ರಾಧಿಕಾ ಮತ್ತು ಸುಪ್ರಿಯ ಕಾರ್ಯಕ್ರಮ ನಿರೂಪಿಸಿ, ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್ ಅನಿಲ್‌ಕುಮಾರ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್ ಶಾಲಾ ವಾರ್ಷಿಕ ವರದಿ ಮಂಡಿಸಿದರು. 
    ಕಳೆದ ವರ್ಷ ಉತ್ತಮ ಅಂಕ ಪಡೆದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡುವ ಮೂಲಕ ಅಭಿನಂದಿಸಲಾಯಿತು. ಶಾಲೆಯಲ್ಲಿ ವ್ಯಾಸಂಗ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.                   
     ಆರ್. ಸುನಿತಾ ಹಾಗೂ ಎ. ತನುಜಾ ವಿದ್ಯಾರ್ಥಿಗಳ ಬಹುಮಾನ ವಿತರಣೆ ಹಾಗೂ ಪೋಷಕರ  ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ವೇದಿಕೆ ಮೇಲೆ ಸಂಸ್ಥೆಯ ಟ್ರಸ್ಟಿಗಳಾದ ಜಿ. ಸುರೇಶ್ ಕುಮಾರ್  ಹಾಗೂ ಎಸ್.ಎನ್ ಭಾಗ್ಯಲಕ್ಷ್ಮಿ  ಉಪಸ್ಥಿತರಿದ್ದರು. ಟ್ರಸ್ಟ್ ಉಪಾಧ್ಯಕ್ಷ ಕೆ.ಪಿ ಹರೀಶ್ ಕುಮಾರ್ ವಂದಿಸಿದರು.  ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ನೃತ್ಯ  ಹಾಗೂ ನಾಟಕ ಪ್ರದರ್ಶನ ನಡೆಸಿಕೊಟ್ಟರು. 

No comments:

Post a Comment