Friday, December 27, 2024

ಡಿ.೨೮ರಂದು ಶ್ರೀ ರಾಮಾಯಣ ದರ್ಶನಂ ಆಧಾರಿತ ಉಪನ್ಯಾಸ-ಪ್ರಾತ್ಯಕ್ಷಿಕೆ



    ಭದ್ರಾವತಿ: ನಗರದ ರೋಟರಿ ಕ್ಲಬ್ ವತಿಯಿಂದ ಆನಂದ ಆರೋಗ್ಯ ನೃತ್ಯ ಪ್ರಾತ್ಯಕ್ಷಿಕಾ ಮಾಲಿಕೆ `ರಾಮಂಗೆ ಮೊದಲಲ್ತೆ ರಾಮಾಯಣಂ?' ವಿಶೇಷ ಕಾರ್ಯಕ್ರಮ ರಾಷ್ಟ್ರಕವಿ ಕುವೆಂಪುರವರ ಜ್ಞಾನಪೀಠ ಪುರಸ್ಕೃತ ಶ್ರೀ ರಾಮಾಯಣ ದರ್ಶನಂ ಆಧಾರಿತ ಉಪನ್ಯಾಸ-ಪ್ರಾತ್ಯಕ್ಷಿಕೆ ಡಿ.೨೮ರಂದು ಸಂಜೆ ೬ ಗಂಟೆಗೆ ನಗರದ ರೋಟರಿ ಕ್ಲಬ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಮನೋವೈದ್ಯೆ, ನೃತ್ಯ ಕಲಾವಿದೆ ಡಾ.ಕೆ.ಎಸ್ ಪವಿತ್ರಾ ಅವರಿಂದ ಉಪನ್ಯಾಸ-ಪ್ರಾತ್ಯಕ್ಷಿಕೆ ನಡೆಯಲಿದ್ದು, ಡಾ. ಅನುರಾಧ ಪಟೇಲ್ ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ಜಿ. ರಾಘವೇಂದ್ರ ಉಪಾಧ್ಯಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

No comments:

Post a Comment