Friday, December 27, 2024

ಮನಮೋಹನ ಸಿಂಗ್ ನಿಧನಕ್ಕೆ ಶಾಸಕ ಸಂಗಮೇಶ್ವರ್ ಸಂತಾಪ

    ಭದ್ರಾವತಿ : ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ ನಿಧನಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ. 
    ಮನಮೋಹನ ಸಿಂಗ್‌ರವರು ಅರ್ಥಶಾಸ್ತ್ರದ ಪ್ರಾಧ್ಯಾಪಕ, ಪ್ರಧಾನ ಆರ್ಥಿಕ ಸಲಹೆಗಾರ ಕೇಂದ್ರ ವಿತ್ತ ಕಾರ್ಯದರ್ಶಿ, ರಿಸರ್ವ್ ಬ್ಯಾಂಕ್ ಗವರ್ನರ್, ಯೋಜನಾ ಆಯೋಗದ ಉಪಾಧ್ಯಕ್ಷ,  ವಿಶ್ವ ವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ, ಕೇಂದ್ರ ವಿತ್ತ ಸಚಿವ ಹಾಗು ೨ ಬಾರಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. 
    ಧೀಮಂತ ನಾಯಕ, ದೇಶದ ಹಿರಿಯ ಮುತ್ಸದ್ದಿ, ಅಜಾತ ಶತೃ ಮನಮೋಹನ ಸಿಂಗ್‌ರವರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ಇವರ ನಿಧನದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿ ಭಗವಂತ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ. 

No comments:

Post a Comment