Tuesday, December 3, 2024

ವಿಐಎಸ್‌ಎಲ್ ಕಾರ್ಖಾನೆ ಕುರಿತು ಚರ್ಚೆ : ಬಿ.ವಿ ಶ್ರೀನಿವಾಸ್ ಭರವಸೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮೂಲತಃ ನಗರದ ನಿವಾಸಿ ಬಿ.ವಿ ಶ್ರೀನಿವಾಸ್ ಭೇಟಿ ಶ್ರೀ ಚೌಡೇಶ್ವರಿ ದೇವಿಯ ದರ್ಶನ ಪಡೆದರು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮೂಲತಃ ನಗರದ ನಿವಾಸಿ ಬಿ.ವಿ ಶ್ರೀನಿವಾಸ್ ಭೇಟಿ ಶ್ರೀ ಚೌಡೇಶ್ವರಿ ದೇವಿಯ ದರ್ಶನ ಪಡೆದರು. 
    ಈ ಸಂದರ್ಭದಲ್ಲಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಹಾಗು ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿಕೊಡುವ ಮೂಲಕ ಅವರ ಹಿತರಕ್ಷಣೆ ಮಾಡುವಂತೆ ಸ್ಥಳಿಯರು ಮನವಿ ಮಾಡಿದರು. 
    ಶೀಘ್ರದಲ್ಲಿ ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಈ ಸಂಬಂಧ ಚರ್ಚಿಸುವುದಾಗಿ ಬಿ.ವಿ ಶ್ರೀನಿವಾಸ್ ಭರವಸೆ ನೀಡಿದರು.
    ದೇವಸ್ಥಾನದ ಪ್ರಧಾನ ಅರ್ಚಕ ಮುರಳೀಧರ, ಮುಖಂಡರಾದ ರಾಮಕೃಷ್ಣ, ಕಾಶಿ, ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

No comments:

Post a Comment