Sunday, December 15, 2024

ಅಧಿಕಾರಿಗಳ ಸಂಘದಿಂದ ಸ್ವಚ್ಛತಾ ಅಭಿಯಾನ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದ ಅಧಿಕಾರಿಗಳ ಸಂಘದ ಅವತಿಯಿಂದ ವಾರ್ಡ್ ನಂ.೬ರ ಎ.ಎನ್ ಕೃಷ್ಣಮೂರ್ತಿ ಉದ್ಯಾನವನದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದ ಅಧಿಕಾರಿಗಳ ಸಂಘದ ಅವತಿಯಿಂದ ವಾರ್ಡ್ ನಂ.೬ರ ಎ.ಎನ್ ಕೃಷ್ಣಮೂರ್ತಿ ಉದ್ಯಾನವನದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 
    ಅಭಿಯಾನ ಉದ್ಘಾಟಿಸಿ ಮಾತನಾಡಿದ ಸಂಘದ ಅಧ್ಯಕ್ಷ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕೈಗೊಳ್ಳುವ ಮನೋಭಾವ ಬೆಳೆಸಿಕೊಂಡು ಉತ್ತಮ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದರು. 
    ಸಂಘದ ಕಾರ್ಯದರ್ಶಿ ವಿ. ಪ್ರಕಾಶ್, ಖಜಾಂಚಿ ಶಿವಬಸಪ್ಪ, ಸದಸ್ಯರಾದ ಪ್ರೊ. ಎಂ. ಚಂದ್ರಶೇಖರಯ್ಯ, ಪ್ರೊ. ಗಂಗರಾಜ್, ಪ್ರೊ. ಶ್ರೀನಿವಾಸ್, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಮತ್ತು  ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment