Saturday, December 28, 2024

ಡಿ.೨೯ರಂದು ಪ್ರತಿಭಾ ಪುರಸ್ಕಾರ-ಸನ್ಮಾನ ಸಮಾರಂಭ


  
 ಭದ್ರಾವತಿ: ತಾಲೂಕು ಕುರುಬರ ಸಂಘದ ವತಿಯಿಂದ ಡಿ.೨೯ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ  ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. 
    ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಶಾಖಾ ಮಠ, ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಅಧ್ಯಕ್ಷತೆ ವಹಿಸಲಿದ್ದಾರೆ. 
ಬೆಂಗಳೂರು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ, ಇನ್‌ಸೈಟ್-ಐಎಎಸ್ ಸಂಸ್ಥೆ ಸಂಸ್ಥಾಪಕ ಬಿ.ಜಿ ವಿನಯ್‌ಕುಮಾರ್, ತಹಸೀಲ್ದಾರ್ ಪರುಶಪ್ಪ ಕುರುಬರ , ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ ರಾಮಚಂದ್ರಪ್ಪ, ಕುರುಬರ ಸಂಘದ ಮಾಜಿ ಅಧ್ಯಕ್ಷ ಕೆ. ಕರಿಯಪ್ಪ, ಶ್ರೀ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ, ಉಪಾಧ್ಯಕ್ಷ ಡಾ. ಎಚ್.ಆರ್ ನರೇಂದ್ರ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎಚ್ ಉಮೇಶ್, ಕನಕ ಯುವ ಪಡೆ ಅಧ್ಯಕ್ಷ ಕೆ. ಲೋಕೇಶ್, ಸಂಗೊಳ್ಳಿರಾಯಣ್ಣ ಯುವಪಡೆ ಅಧ್ಯಕ್ಷ ಜಿ.ಎಸ್ ಹನುಮಂತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.  

No comments:

Post a Comment