ಭದ್ರಾವತಿ: ತಾಲೂಕಿನ ಕಡದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದಾರೆ.
ಸಾಮಾನ್ಯ ಸ್ಥಾನದಿಂದ ಬಿ. ಆನಂದ, ಇಂದ್ರೇಗೌಡ, ಸುರೇಶ್, ಉಮೇಶ್, ಕೆ.ಜಿ ರವಿಕುಮಾರ್, ಮಹಿಳಾ ಮೀಸಲು ಕ್ಷೇತ್ರದಿಂದ ಎ. ಭಾಗ್ಯಲಕ್ಷ್ಮೀ, ಪಾರ್ವತಮ್ಮ, ಹಿಂದುಳಿದ `ಎ' ವರ್ಗದಿಂದ ಬಿ.ಎಸ್ ಹನುಮಂತಪ್ಪ, `ಬಿ' ವರ್ಗದಿಂದ ಡಿ. ಶಿವಶಂಕರ್, ಪರಿಶಿಷ್ಟ ಜಾತಿ ನಾಗರಾಜನಾಯ್ಕ ಮತ್ತು ಪರಿಶಿಷ್ಟ ಪಂಗಡದಿಂದ ಹನುಮಂತಪ್ಪ ಹಾಗು ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ವೆಂಕಟೇಶ್ ಸೇರಿದಂತೆ ಒಟ್ಟು ೧೨ ಮಂದಿ ನಿರ್ದೇಶಕರು ನೂತನವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
No comments:
Post a Comment