Tuesday, December 24, 2024

ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲಿಸಿ, ಹೊಸ ಡಿಜಿಟಲ್ ಭಾವಚಿತ್ರ ಅಳವಡಿಸಿ

ಭದ್ರಾವತಿ ನಗರದಲ್ಲಿರುವ ಎರಡು ಇಂದಿರಾ ಕ್ಯಾಂಟೀನ್‌ಗಳ ಆಹಾರ ಗುಣಮಟ್ಟ ಪರಿಶೀಲನೆ ನಡೆಸುವ ಜೊತೆಗೆ ಹೊಸದಾಗಿ ಇಂದಿರಾ ಗಾಂಧಿಯವರ ಡಿಜಿಟಲ್ ಭಾವಚಿತ್ರ ಅಳವಡಿಸುವಂತೆ ಒತ್ತಾಯಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮಂಗಳವಾರ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ನಗರದಲ್ಲಿರುವ ಎರಡು ಇಂದಿರಾ ಕ್ಯಾಂಟೀನ್‌ಗಳ ಆಹಾರ ಗುಣಮಟ್ಟ ಪರಿಶೀಲನೆ ನಡೆಸುವ ಜೊತೆಗೆ ಹೊಸದಾಗಿ ಇಂದಿರಾ ಗಾಂಧಿಯವರ ಡಿಜಿಟಲ್ ಭಾವಚಿತ್ರ ಅಳವಡಿಸುವಂತೆ ಒತ್ತಾಯಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮಂಗಳವಾರ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಮನವಿ ಸಲ್ಲಿಸಲಾಯಿತು. 
    ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿರುವ ಹಾಗು ಸಂತೆ ಮೈದಾನದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಳವಡಿಸಲಾಗಿರುವ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಭಾವಚಿತ್ರ ತುಂಬಾ ಹಳೇಯದಾಗಿದ್ದು, ಅಲ್ಲದೆ ಹಾಳಾಗಿದೆ.  ಈ ಹಿನ್ನಲೆಯಲ್ಲಿ ಹೊಸದಾಗಿ ಡಿಜಿಟಲ್ ಭಾವಚಿತ್ರ ಅಳವಡಿಸಬೇಕು. ಕ್ಯಾಂಟೀನ್‌ನಲ್ಲಿ ಆಹಾರ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಕೋರಲಾಗಿದೆ. 
    ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಬಿ. ಗಂಗಾಧರ್, ಜಗದೀಶ್ ಬೋಸ್ಲೆ, ಹರೀಶ್ ಕುಮಾರ್, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment