ರಾಜ್ಯದ ವಿವಿಧೆಡೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಲಾರಿ ಚಾಲಕನಿಂದ ಭದ್ರಾವತಿ ನಗರದ ಸಂಚಾರಿ ಠಾಣೆ ಪೊಲೀಸರು ದಂಡ ವಸೂಲಾತಿ ಮಾಡಿರುವ ಘಟನೆ ನಡೆದಿದೆ.
ಭದ್ರಾವತಿ : ರಾಜ್ಯದ ವಿವಿಧೆಡೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಲಾರಿ ಚಾಲಕನಿಂದ ನಗರದ ಸಂಚಾರಿ ಠಾಣೆ ಪೊಲೀಸರು ದಂಡ ವಸೂಲಾತಿ ಮಾಡಿರುವ ಘಟನೆ ನಡೆದಿದೆ.
ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ಹಾಗು ಸಿಬ್ಬಂದಿಗಳು ವಾಹನಗಳ ತಪಾಸಣೆ ಕರ್ತವ್ಯ ನಿರ್ವಹಣೆಯಲ್ಲಿದ್ದಾಗ ರಾಜ್ಯದ ವಿವಿಧೆಡೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವ ಲಾರಿ ಚಾಲಕನೋರ್ವ ಸಿಕ್ಕಿಬಿದ್ದಿದ್ದು, ಈ ಚಾಲಕನ ವಿರುದ್ಧ ರಾಜ್ಯದ ವಿವಿಧೆಡೆ ಒಟ್ಟು ೧೦ ಐಎಂವಿ ಪ್ರಕರಣಗಳು ದಾಖಲಾಗಿರುವ ಮಾಹಿತಿ ಬಂದಿದೆ. ತಕ್ಷಣ ಚಾಲಕನಿಂದ ಒಟ್ಟು ೫,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ.
ರಾಜ್ಯದ ಬೇರೆಡೆ ರಸ್ತೆ ಸಂಚಾರಿ ನಿಯಮ ಉಲ್ಲಂಘಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಸಂಚಾರಿ ಠಾಣೆಯಲ್ಲಿ ದಂಡ ಪಾವತಿಸಬಹುದಾಗಿದೆ. ನಗರದಲ್ಲೂ ಈ ಸೌಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಠಾಣಾಧಿಕಾರಿ ಶಾಂತಲ ಕೋರಿದ್ದಾರೆ.
No comments:
Post a Comment