Monday, December 16, 2024

ಪುರಸಭೆ ಮಾಜಿ ಸದಸ್ಯ ಎನ್. ಕೃಷ್ಣಮೂರ್ತಿ ನಿಧನ

    ಎನ್. ಕೃಷ್ಣಮೂರ್ತಿ
    ಭದ್ರಾವತಿ : ನಗರದ ಹಿರಿಯ ಕಾಂಗ್ರೆಸ್ ಮುಖಂಡ, ಪುರಸಭೆ ಮಾಜಿ ಸದಸ್ಯ ಎನ್. ಕೃಷ್ಣಮೂರ್ತಿ(೭೮) ಸೋಮವಾರ ನಿಧನ ಹೊಂದಿದರು. 
    ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರರು ಇದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಕೃಷ್ಣಮೂರ್ತಿಯವರು ವಾರ್ಡ್ ನಂ.೩ರ ಚಾಮೇಗೌಡ ಏರಿಯಾದಲ್ಲಿ ವಾಸಿಸುತ್ತಿದ್ದು, ಹಲವು ವರ್ಷಗಳ ಕಾಲ ಹಳೇನಗರದ ಮಾಡಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪುರಸಭೆ ಸದಸ್ಯರಾಗಿ ಸಹ ಸೇವೆ ಸಲ್ಲಿಸಿದ್ದರು. 
    ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಾಡಲ್ ಕೋ-ಅಪರೇಟಿವ್ ಸೊಸೈಟಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

1 comment:

  1. ಓಂ ಶಾಂತಿ. ಓಂ ಶಾಂತಿ

    ReplyDelete