Sunday, December 29, 2024

ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ : ರಥಯಾತ್ರೆಗೆ ಅದ್ದೂರಿ ಸ್ವಾಗತ

ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಗರಕ್ಕೆ ಆಗಮಿಸಿದ ರಥಯಾತ್ರೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ನೇತೃತ್ವದಲ್ಲಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಪ್ರತಿಮೆಗೆ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಪುಷ್ಪ ಮಾಲೆ ಹಾಕುವ ಮೂಲಕ ಸ್ವಾಗತಿಸಿದರು. 
    ಭದ್ರಾವತಿ: ಸಾವಿರಾರು ವರ್ಷಗಳ ಹಿಂದೆ ಕಪಿಲಾ ನದಿ ತೀರದಲ್ಲಿ ಶ್ರೀ ಸುತ್ತೂರು ಕ್ಷೇತ್ರವನ್ನು ದಿವ್ಯ ತಪ್ಪಸ್ಸಿನಿಂದ ಸಂಸ್ಥಾಪಿಸಿ ಬೆಳಗಿದ ಮಹಾಮಹಿಮ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಜ.೨೬ ರಿಂದ ೩೧ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ರಥಯಾತ್ರೆಯನ್ನು ಭಾನುವಾರ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದ ಸಮೀಪ ಅದ್ದೂರಿಯಾಗಿ ಸ್ವಾಗತಿಸಲಾಯಿತು. 
    ನಗರಕ್ಕೆ ಆಗಮಿಸಿದ ರಥಯಾತ್ರೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ನೇತೃತ್ವದಲ್ಲಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಪ್ರತಿಮೆಗೆ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಪುಷ್ಪ ಮಾಲೆ ಹಾಕುವ ಮೂಲಕ ಸ್ವಾಗತಿಸಿದರು. 
    ಪ್ರಮುಖರಾದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನ್, ಉದ್ಯಮಿ ಬಿ.ಕೆ ಜಗನ್ನಾಥ್, ಡಾ. ಜಿ.ಎಂ ನಟರಾಜ್, ಡಾ. ಬಿ.ಜಿ ಧನಂಜಯ, ಜಗದೀಶ್ ಕವಿ, ಸಿದ್ದಲಿಂಗಯ್ಯ, ನಂದಿನಿ, ಮಲ್ಲಿಕಾಂಬ, ಪೂರ್ಣಿಮಾ, ಹೇಮಾವತಿ ಚಿಗಟೇರಪ್ಪ, ಎಂ. ವಿರುಪಾಕ್ಷಪ್ಪ, ಟಿ.ಜಿ ಬಸವರಾಜಯ್ಯ, ರಾಜೇಂದ್ರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

No comments:

Post a Comment