Thursday, January 18, 2024

ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್

ಭದ್ರಾವತಿ ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ: ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ಸದಸ್ಯರಾಗಿ ಎಚ್.ಎಂ ಲೋಕೇಶ್, ಎಚ್.ಪಿ ಚಂದ್ರಶೇಖರ್, ಎಚ್.ಎಸ್ ಕುಮಾರ್, ಎಚ್.ಆರ್ ಜಗದೀಶ್, ಎಚ್.ಎ ಶಿವಣ್ಣ, ಎಂ. ಶಿವಕುಮಾರ್, ಸತ್ಯನಾರಾಯಣರಾವ್ ಮತ್ತು ಮಂಜುಳ ಸೇರಿದಂತೆ ೮ ಮಂದಿ ಆಯ್ಕೆಯಾಗಿದ್ದಾರೆ.
    ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸದಸ್ಯರಿಗೆ ಹಿರಿಯೂರು ಗ್ರಾಮಸ್ಥರು, ಹಾಲು ಉತ್ಪಾದಕರು ಹಾಗು ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.

ಜ.೨೨ರಂದು ನಗರಸಭೆ ಅಧ್ಯಕ್ಷರ ಚುನಾವಣೆ : ಲತಾ ಚಂದ್ರಶೇಖರ್ ಆಯ್ಕೆ ಬಹುತೇಕ ಖಚಿತ

ಲತಾ ಚಂದ್ರಶೇಖರ್
    ಭದ್ರಾವತಿ:  ನಗರಸಭೆ ಅಧ್ಯಕ್ಷರ ಚುನಾವಣೆ ಜ.೨೨ರಂದು ನಡೆಯಲಿದ್ದು, ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆ ಆಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮೀಸಲಾತಿ ಮೊದಲ ೩೦ ತಿಂಗಳ ಅವಧಿ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ದೇಶನದಂತೆ ಅರ್ಹ ಸದಸ್ಯರಿಗೆ ಬಿಡುಕೊಡಲಾಗುತ್ತಿದೆ. ಸಾಮಾನ್ಯ ಮಹಿಳಾ ಮೀಸಲು ಹೊಂದಿರುವ ಅಧ್ಯಕ್ಷ ಸ್ಥಾನ ಅಧಿಕಾರ ಈಗಾಗಲೇ ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ ಮತ್ತು ಶೃತಿ ಸಿ. ವಸಂತಕುಮಾರ್ ಕೆ.ಸಿ ಒಟ್ಟು ೩ ಮಂದಿ ಸದಸ್ಯರು ಅನುಭವಿಸಿದ್ದಾರೆ. ಉಳಿದ ಅವಧಿಗೆ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
    ಈ ಹಿಂದೆಯೇ ಅಧಿಕಾರ ಅನುಭವಿಸಬೇಕಾಗಿದ್ದ ಲತಾ ಚಂದ್ರಶೇಖರ್ ಅವರಿಗೆ ಮೀಸಲಾತಿ ಕೊನೆ ಅವಧಿ ಅಧಿಕಾರ ಬಿಟ್ಟುಕೊಡುವುದಾಗಿ ತೀರ್ಮಾನಿಸಲಾಗಿತ್ತು. ಅದರಂತೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಜ.೨೨ರಂದು ಚುನಾವಣೆ ನಡೆಯಲಿದೆ.
    ಪ್ರಸ್ತುತ ನಗರಸಭೆಯಲ್ಲಿ ೧೮ ಕಾಂಗ್ರೆಸ್, ೧೨ ಜೆಡಿಎಸ್, ೪ ಬಿಜೆಪಿ ಹಾಗು ೧ ಪಕ್ಷೇತರ ಸದಸ್ಯರಿದ್ದಾರೆ. ಲತಾ ಚಂದ್ರಶೇಖರ್‌ರವರು ಮೂಲತಃ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮೊದಲ ಬಾರಿಗೆ ವಾರ್ಡ್ ನಂ.೩೪ರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
    ಜ.೨೨ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧.೧೫ ರಿಂದ ೧.೩೦ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ. ೧.೩೦ರ ನಂತರ ಅಧ್ಯಕ್ಷ ಘೋಷಣೆ ನಡೆಯಲಿದೆ. ಈ ಸಂಬಂಧ ಜ.೧೦ರಂದು ಉಪವಿಭಾಗಾಧಿಕಾರಿ ಚುನಾವಣೆ ಸೂಚನೆ ಪತ್ರ ಹೊರಡಿಸಿದ್ದಾರೆ.

ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹ

ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಪೋಷಕರಿಂದ ಮನವಿ

ಭದ್ರಾವತಿ ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ಭದ್ರಾವತಿ: ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ದೇಹದಾರ್ಢ್ಯ ಪಟು ರತಿಲ ಕುಮಾರ್ ಮೇ.೧೩, ೨೦೨೩ರಂದು ಸಾವನ್ನಪ್ಪಿದ್ದರು. ಇವರ ಮೃತದೇಹ ಸಿರಿಯೂರು ವೀರಾಪುರ ನಾಲೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು.
    ಇದೀಗ ರತಿಲ ಕುಮಾರ್ ಅವರ ತಂದೆ ಇಂದ್ರೇಶ್ ಅವರು, ಅಂದು ಮದುವೆಗೆ ಹೋಗಿದ್ದ ರತಿಲ ಕುಮಾರ್‌ಗೆ ಬಾರ್ ಒಂದರಲ್ಲಿ ಕುಡಿಸಿ ಗಲಾಟೆ ಮಾಡಲಾಗಿತ್ತು. ನಂತರ ನಾಲೆಯ ಬಳಿ ಕರೆದುಕೊಂಡು ಹೋಗಿ ತಲೆಗೆ ಬಲವಾಗಿ ಹೊಡೆದು ನೀರಿಗೆ ತಳ್ಳಿ ಕೊಲೆ ಮಾಡಲಾಗಿದೆ. ಪೊಲೀಸರು ಯುಡಿಆರ್ ಪ್ರಕರಣವೆಂದು ದಾಖಲಿಸಿ ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
    ರತಿಲ ಕುಮಾರ್ ಸ್ನೇಹಿತರೊಂದಿಗೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಕಳೆದ ಸುಮಾರು ೮ ತಿಂಗಳಿನಿಂದ ನ್ಯಾಯಕ್ಕಾಗಿ ಅಲೆಯುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗು  ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದು, ಐಪಿಸಿ ಸೆಕ್ಷನ್ ೩೦೨ರಡಿ ಕೊಲೆ ಪ್ರಕರಣ ದಾಖಲಿಸಿ ಮರು ತನಿಖೆ ಕೈಗೊಳ್ಳುವಂತೆ ಎಎಸ್‌ಪಿ ಕರಿಯಪ್ಪರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
    ರತಿಲ ಕುಮಾರ್ ಸಹೋದರಿ ದೀಪ್ತಿ, ಸ್ನೇಹಿತರಾದ ಅಂತೋಣಿ ವಿಲ್ಸನ್, ಮಂಜುನಾಥ್, ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.