Wednesday, September 25, 2024

ಬಿಜೆಪಿ ಒಬಿಸಿ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ

ಭದ್ರಾವತಿ ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ನಡೆಸಲಾಯಿತು. ಮಂಡಲ ಒಬಿಸಿ ಅಧ್ಯಕ್ಷ ರಾಜಶೇಖರ್ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು.
    ಮಂಡಲ ಅಧ್ಯಕ್ಷರಾದ ಧರ್ಮ ಪ್ರಸಾದ್ ಅವರು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯ ಅವರ ಮಹತ್ವದ ಸಂದೇಶಗಳಾದ ಏಕಾತ್ಮ ಮಾನವದರ್ಶನ, ಅಂತ್ಯೋದಯದ ಅದ್ಭುತ ಪರಿಕಲ್ಪನೆ, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸಮಸ್ತ ಎಂಬ ತತ್ವಗಳ ದೃಷ್ಟಿಕೋನವನ್ನು ಬೆಳೆಸಿಕೊಂಡು ಈ ತತ್ವಗಳನ್ನು ಉಸಿರಾಗಿಸಿಕೊಂಡ ಮಹಾತ್ಮರಿಗೆ ನಮಿಸಿದರು.   
    ಒಬಿಸಿ ಜಿಲ್ಲಾಧ್ಯಕ್ಷ ಎಂ.ಎನ್ ಸುಧಾಕರ್, ಅಭಿಯಾನದ ಜಿಲ್ಲಾ ಪ್ರಭಾರಿ ಭವಾನಿರಾವ್ ಮೋರೆ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತ ಗರಿಷ್ಠ ೧೦೦ ಸದಸ್ಯತ್ವದ ಗುರಿ ಹೊಂದಬೇಕೆಂದು ವಿನಂತಿಸಿಕೊಂಡರು. 
    ಜಿಲ್ಲಾ ಒಬಿಸಿ ಉಪಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಕೆ.ಎನ್ ವಿಕಾಸ್, ಎಂ. ಪ್ರಭಾಕರ್, ಎನ್. ರಂಗನಾಥ್ ಹಾಗು ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ

ಭದ್ರಾವತಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮಾತನಾಡಿದರು. 
    ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣದ ಸಮೀಪದಲ್ಲಿರುವ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಪರ್ವೀಜ್ ತಿಳಿಸಿದರು. 
  ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಲವಾರ ವರ್ಷಗಳಿಂದ ಸಂಘ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಪದಾಧಿಕಾರಿಗಳನ್ನು ಪುನರ್ ಆಯ್ಕೆ ಮಾಡಲಾಗಿದೆ. ಅದರಂತೆ ಅಧ್ಯಕ್ಷ ಮಹಮ್ಮದ್ ಪರ್ವೀಜ್, ಉಪಾಧ್ಯಕ್ಷರಾಗಿ ಬಸವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಜಗದೀಶ್, ಕಾರ್ಯದರ್ಶಿಯಾಗಿ ಶ್ರೀ ಕುಮಾರ್, ಖಜಾಂಚಿಯಾಗಿ ಮುಬಾರಕ್ ಹಾಗು ನಿರ್ದೇಶಕರಾಗಿ ಸಂತೋಷ್ ಕುಮಾರ್(ಬಾಬು), ಎ. ರಾಜಣ್ಣ, ನೇವಿಲ್ ಪೆರೆರಾ, ಅಬ್ದುಲ್ ರೆಹಮಾನ್, ವಾಸುದೇವ ಆಚಾರ್, ಮಹೇಶ್, ರಾಕೇಶ್, ಗೋವಿಂದ ಮತ್ತು ಎಸ್.ಎನ್ ಕಾಂತರಾಜುರವರು ಆಯ್ಕೆಯಾಗಿದ್ದಾರೆ ಎಂದರು. 
    ಪ್ರಸ್ತುತ ವಾಹನ ಚಾಲಕರು ಮತ್ತು ಮಾಲೀಕರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಸರ್ಕಾರ ವಾಹನಗಳ ತೆರಿಗೆ ವಿಮೆ ಮೊತ್ತ ಹೆಚ್ಚಿಸಿರುವುದು ಸರಿಯಲ್ಲ. ತಕ್ಷಣ ಹೆಚ್ಚಿಸಿರುವ ಮೊತ್ತ ಹಿಂಪಡೆಯಬೇಕು. ಯಾವುದೇ ವಸತಿ ಸೌಲಭ್ಯಗಳು ಇಲ್ಲದ ಕಾರಣ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಬೇಕು. ಹಲವಾರು ಬೇಡಿಕೆಗಳಿದ್ದು, ಇವುಗಳನ್ನು ಈಡೇರಿಸಿಕೊಡುವ ಮೂಲಕ ಹಿತಕಾಪಾಡುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.   

ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತು : ಖಂಡನೆ

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿ ಮುಂಭಾಗ ಡಿಎಸ್‌ಎಸ್ ಪ್ರತಿಭಟನೆ 

ಭದ್ರಾವತಿ ಇಲ್ಲಿನ ಅರಣ್ಯ ವಿಭಾಗದ ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಬಿ.ಎಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. 
    ಭದ್ರಾವತಿ: ಇಲ್ಲಿನ ಅರಣ್ಯ ವಿಭಾಗದ ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರನ ವಿರುದ್ಧ ಸುಳ್ಳು ವರದಿ ನೀಡಿ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಬಿ.ಎಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. 
    ಮಾವಿನಕೆರೆ ವಲಯದಲ್ಲಿ ಬೀಟ್ ಫಾರೆಸ್ಟ್ ದಲಿತ ನೌಕರ ರಾಮು ದೊಡ್ಮನೆ ಎಂಬುವರು ಕಳೆದ ಸುಮಾರು ೮ ವರ್ಷಗಳಿಂದ ಮಾವಿನಕೆರೆ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಯಾವುದೇ ಆರೋಪಗಳು ಇರುವುದಿಲ್ಲ. ವಲಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಗದೀಶ್‌ರವರಿಗೆ ಮೇಲಾಧಿಕಾರಿಗಳಿಂದ ತಾಲೂಕಿನ ಗುಡಮಘಟ್ಟ ಗ್ರಾಮದ ಸರ್ವೆ ನಂ.೪೩ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರೈತರು ಅಕ್ರಮವಾಗಿ ಸಾಗುವಳಿ ಮಾಡಿರುವ ಕುರಿತು ಮಾಹಿತಿ ಬಂದಿದ್ದು, ಈ ಹಿನ್ನಲೆಯಲ್ಲಿ ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ  ಸೂಚನೆ ಬಂದಿದೆ. ಈ ಹಿನ್ನಲೆಯಲ್ಲಿ ಜಗದೀಶ್‌ರವರು ರಾಮು ಅವರಿಗೆ ಗುಡಮಘಟ್ಟ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ. 
    ರಾಮುರವರು ಸ್ಥಳಕ್ಕೆ ತೆರಳಿ ಸರ್ವೆ ಕಾರ್ಯ ನಡೆಸಿ ಪ್ರಾಮಾಣಿಕವಾಗಿ ವರದಿ ಸಲ್ಲಿಸಿದ್ದಾರೆ. ಆದರೆ ಜಗದೀಶ್‌ರವರು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಅರಣ್ಯ ಇಲಾಖೆ ಭೂಮಿಯನ್ನು ಕಂದಾಯ ಇಲಾಖೆ ಭೂಮಿ ಎಂಬುದಾಗಿ ಸುಳ್ಳು ವರದಿ ನೀಡಿದ್ದಾರೆಂದು ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಮು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಜಗದೀಶ್‌ರವರು ತಮ್ಮ ಅಕ್ರಮಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ಈ ರೀತಿ ಮಾಡಿದ್ದು, ಅಮಾನತು ಆದೇಶ ಪತ್ರ ಬಂದ ನಂತರ ಆರೋಗ್ಯ ನೆಪ ಹೇಳಿ ಜಗದೀಶ್‌ರವರು ಸುಮಾರು ೧೫ ದಿನ ಕರ್ತವ್ಯಕ್ಕೆ ರಜಾ ಸಲ್ಲಿಸಿದ್ದಾರೆಂದು ದಲಿತ ಮುಖಂಡರು ಆರೋಪಿಸಿದರು. 
    ತಕ್ಷಣ ರಾಮು ಅವರ ಮೇಲಿನ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಬೇಕು. ತಕ್ಷಣ ರಾಮು ಅವರನ್ನು ಕರ್ತವ್ಯ ಸೇರ್ಪಡೆಮಾಡಿಕೊಳ್ಳಬೇಕು. ಜಗದೀಶ್‌ರವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
    ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸತ್ಯ ಭದ್ರಾವತಿ ಮತ್ತು ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಮುಖಂಡರಾದ ಸಿ. ಜಯಪ್ಪ ಹೆಬ್ಬಲಗೆರೆ, ಈಶ್ವರಪ್ಪ, ಮಣಿ ಜಿಂಕ್‌ಲೈನ್, ಪರಮೇಶ್ವರಪ್ಪ, ಎನ್. ಗೋವಿಂದ, ಸುಬ್ರಮಣಿ(ಕಬಡ್ಡಿ), ಈಶ್ವರಪ್ಪ(ನಗರಸಭೆ), ಸಂದೀಪ್, ಸುರೇಶ್(ಕೂಡ್ಲಿಗೆರೆ), ಎನ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
 

ಬಲಿಜ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಎಚ್.ಆರ್ ರಂಗನಾಥ್ ಆಯ್ಕೆ

ಭದ್ರಾವತಿ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ರಂಗನಾಥ್‌ರವರು ಆಯ್ಕೆಯಾಗಿದ್ದಾರೆ. ರಂಗನಾಥ್‌ರವರು ಹಿರಿಯ ಕಬಡ್ಡಿ ಆಟಗಾರರಾಗಿದ್ದು, ಕೇಸರಿ ಪ್ರಶಸ್ತಿ ವಿಜೇತರಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಹಿಂದೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 
    ಸಭೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಸಂಜೀವ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಸುಬ್ರಮಣ್ಯ(ತಾತಯ್ಯ), ಉಪಾಧ್ಯಕ್ಷರಾದ ಜಂಗಮಪ್ಪ, ಶಕುಂತಲ, ಕಾರ್ಯದರ್ಶಿ ಟಿ. ರಮೇಶ್, ಖಜಾಂಚಿ ನರೇಂದ್ರ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸ್ವಚ್ಛ ಭಾರತ ಅಭಿಯಾನ : ಶಾಲಾ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ


 ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.  
ಭದ್ರಾವತಿ:  ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೆಶಕ ಬಿ.ಎಲ್ ಚಂದ್ವಾನಿ ಸ್ಪರ್ಧೆ ಉದ್ಘಾಟಿಸಿ ಆಂಗ್ಲಭಾಷೆಯಲ್ಲಿ ಸ್ವಚ್ಛತೆಯ ಪ್ರತಿಜ್ಞೆಯನ್ನು ಬೋಧಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಕನ್ನಡದಲ್ಲಿ  ಬೋಧಿಸಿದರು. 
ಬಿ.ಎಲ್ ಚಂದ್ವಾನಿ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯ ಅಭ್ಯಾಸ ಅಳವಡಿಸಿಕೊಳ್ಳಬೇಕು ಮತ್ತು ಇತರರಿಗೂ ಈ ಅಭ್ಯಾಸ ರೂಢಿಸಿಕೊಳ್ಳಲು ಪ್ರೇರೇಪಿಸಬೇಕು ಎಂದರು.
    ಕಾರ್ಖಾನೆಯ ಪರಿಸರ ನಿರ್ವಹಣಾ ವಿಭಾಗದ ಮಹಾಪ್ರಬಂಧಕ ಮುತ್ತಣ್ಣ ಸುಬ್ಬರಾವ್ ಮಾತನಾಡಿ, ಸ್ವಚ್ಛತೆಯು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು.
    ಮಾರುಕಟ್ಟೆ ವಿಭಾಗದ ಮಹಾಪಬಂಧಕ ಹರಿಕೃಷ್ಣ ಗುಡೆ, ಪರಿಸರ ನಿರ್ವಹಣಾ ವಿಭಾಗದ ಉಪ ಮಹಾಪಬಂಧಕ ವಿಕಾಸ್ ಬಸೇರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. ತಾಲೂಕಿನ ೧ ರಿಂದ ೧೦ನೇ ತರಗತಿವರೆಗಿನ ಒಟ್ಟು ೪೨೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮಲ್ಲಿನ ಪರಿಸರದ ಮೇಲಿನ ಅಭಿಮಾನ ಹಾಗು ಪ್ರತಿಭೆಯನ್ನು ಕಲಾತ್ಮಕ ಚಿತ್ರಣದ ಮೂಲಕ ಪ್ರದರ್ಶಿಸಿದರು.  
 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು. ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. 

ಸ್ವಚ್ಛ ಭಾರತ ಅಭಿಯಾನ : ಶಾಲಾ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಭದ್ರಾವತಿ:  ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೆಶಕ ಬಿ.ಎಲ್ ಚಂದ್ವಾನಿ ಸ್ಪರ್ಧೆ ಉದ್ಘಾಟಿಸಿ ಆಂಗ್ಲಭಾಷೆಯಲ್ಲಿ ಸ್ವಚ್ಛತೆಯ ಪ್ರತಿಜ್ಞೆಯನ್ನು ಬೋಧಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಕನ್ನಡದಲ್ಲಿ  ಬೋಧಿಸಿದರು. 
ಬಿ.ಎಲ್ ಚಂದ್ವಾನಿ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯ ಅಭ್ಯಾಸ ಅಳವಡಿಸಿಕೊಳ್ಳಬೇಕು ಮತ್ತು ಇತರರಿಗೂ ಈ ಅಭ್ಯಾಸ ರೂಢಿಸಿಕೊಳ್ಳಲು ಪ್ರೇರೇಪಿಸಬೇಕು ಎಂದರು.
    ಕಾರ್ಖಾನೆಯ ಪರಿಸರ ನಿರ್ವಹಣಾ ವಿಭಾಗದ ಮಹಾಪ್ರಬಂಧಕ ಮುತ್ತಣ್ಣ ಸುಬ್ಬರಾವ್ ಮಾತನಾಡಿ, ಸ್ವಚ್ಛತೆಯು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು.
    ಮಾರುಕಟ್ಟೆ ವಿಭಾಗದ ಮಹಾಪಬಂಧಕ ಹರಿಕೃಷ್ಣ ಗುಡೆ, ಪರಿಸರ ನಿರ್ವಹಣಾ ವಿಭಾಗದ ಉಪ ಮಹಾಪಬಂಧಕ ವಿಕಾಸ್ ಬಸೇರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. ತಾಲೂಕಿನ ೧ ರಿಂದ ೧೦ನೇ ತರಗತಿವರೆಗಿನ ಒಟ್ಟು ೪೨೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮಲ್ಲಿನ ಪರಿಸರದ ಮೇಲಿನ ಅಭಿಮಾನ ಹಾಗು ಪ್ರತಿಭೆಯನ್ನು ಕಲಾತ್ಮಕ ಚಿತ್ರಣದ ಮೂಲಕ ಪ್ರದರ್ಶಿಸಿದರು.  
 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು. ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು.