Friday, September 27, 2024

ಮಂಜುಳ ನಿಧನ

ಮಂಜುಳ 
    ಭದ್ರಾವತಿ : ಹಳೇನಗರದ ನಿವಾಸಿ, ಉದ್ಗೀತ ಆಯುರ್ವೇದ ವೈದ್ಯ ಡಾ. ಸುದರ್ಶನ ಆಚಾರ್‌ರವರ ಮಾತೃಶ್ರೀ ಎಸ್. ಮಂಜುಳ (೭೦) ನಿಧನ ಹೊಂದಿದರು. 
    ಪತಿ ಶೇಷಗಿರಿ ಆಚಾರ್ ಹಾಗೂ ಪುತ್ರ ಡಾ. ಸುದರ್ಶನ್ ಆಚಾರ್ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ಇವರ ನಿಧನಕ್ಕೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಶಾಖೆ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಸ್ವಚ್ಛತೆಯೇ ಸೇವೆ ಶೀರ್ಷಿಕೆಯಡಿ ಪರಿಸರ ದಿನ

ಭದ್ರಾವತಿ ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ  ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಡಿ ಪರಿಸರ ದಿನ ಆಚರಿಸಲಾಯಿತು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್, ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ  ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಡಿ ಪರಿಸರ ದಿನ ಆಚರಿಸಲಾಯಿತು. 
    ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದರಾಜು, ಉಪ ಪ್ರಾಂಶುಪಾಲ ಎಸ್. ಹನುಮಂತಪ್ಪ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪೂರ್ಣಿಮಾ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

ಉಕ್ಕಿನ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಬೆಂಗಳೂರಿನ ನಿಸರ್ಗ ಚಾರಿಟೇಬಲ್ ಟ್ರಸ್ಟ್, ನಿರಾಶ್ರಿತರ ವೃದ್ಧಾಶ್ರಮ ಹಾಗೂ ಮೈಸೂರು ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ, ಹೂಟಗಳ್ಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ವಿಷ್ಣುವರ್ಧನ್‌ರವರ ೭೪ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಬೆಂಗಳೂರಿನ ನಿಸರ್ಗ ಚಾರಿಟೇಬಲ್ ಟ್ರಸ್ಟ್, ನಿರಾಶ್ರಿತರ ವೃದ್ಧಾಶ್ರಮ ಹಾಗೂ ಮೈಸೂರು ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ, ಹೂಟಗಳ್ಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ವಿಷ್ಣುವರ್ಧನ್‌ರವರ ೭೪ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ, ಹಲವಾರು ವರ್ಷಗಳಿಂದ ರೈಫಲ್ ಅಸೋಸಿಯೇಷನ್ (ಸಿಆರ್‌ಟಿಸಿ) ಮೂಲಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಎಂ.ಎಸ್ ರವಿ, ಅಡುಗೆ ಅನಿಲ ವಿತರಕರಾಗಿ ಕರ್ತವ್ಯ ಸಲ್ಲಿಸುವ ಜೊತೆಗೆ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಸೆಲ್ವರಾಜ್ ಹಾಗು ಉದ್ಯಮಿ ಹಾಗು ಸಮಾಜ ಸೇವಕ ಜಿ.ಎನ್ ಸತ್ಯಮೂರ್ತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಪ್ರಶಸ್ತಿ ಪಡೆದುಕೊಂಡಿರುವ ಗಣ್ಯರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗು ಜನಪ್ರತಿನಿಧಿಗಳು ಅಭಿನಂದಿಸಿದ್ದಾರೆ.