Wednesday, October 2, 2024

ಉಕ್ಕಿನ ನಗರದಲ್ಲಿ ನಾಡಹಬ್ಬ ದಸರಾ ಉದ್ಘಾಟಿಸಲಿರುವ ಸಮಾಜವಾದಿ ಕಾಗೋಡು ತಿಮ್ಮಪ್ಪ

ಭದ್ರಾವತಿ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ನೇತೃತ್ವದಲ್ಲಿ ನಾಡಹಬ್ಬ ದಸರಾ ಆಚರಣೆ ಸಮಿತಿ ವತಿಯಿಂದ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ತೆರಳಿ ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಲಾಯಿತು. 
    ಭದ್ರಾವತಿ :  ನಗರಸಭೆ ವತಿಯಿಂದ ನಾಡಹಬ್ಬ ದಸರಾ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಈ ಬಾರಿ ವಿಶೇಷ ಎಂದರೆ ದಸರಾ ಉದ್ಘಾಟನೆಗೆ ವಿಧಾನಸಭೆ ಮಾಜಿ ಸಭಾಧ್ಯಕ್ಷ, ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜವಾದಿ ಕಾಗೋಡು ತಿಮ್ಮಪ್ಪನವರನ್ನು ಆಹ್ವಾನಿಸಿರುವುದು. 
    ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂಲತಃ ತಾಲೂಕಿನ ಗಣ್ಯರು, ಹಿರಿಯರು, ಮಾರ್ಗದರ್ಶಕರನ್ನು ಗುರುತಿಸಿ ದಸರಾ ಉದ್ಘಾಟನೆಗೆ ಆಹ್ವಾನಿಸಲಾಗುತ್ತಿತ್ತು. ಆದರೆ ಈ ಬಾರಿ ಸಾಗರ ತಾಲೂಕಿನ ಕಾಗೋಡು ತಿಮ್ಮಪ್ಪನವರನ್ನು ಆಹ್ವಾನಿಸಲಾಗಿದೆ. ಕಾಗೋಡು ತಿಮ್ಮಪ್ಪನವರು ಕೇವಲ ಸಾಗರಕ್ಕೆ ಮಾತ್ರ ಸೀಮಿತವಾಗಿಲ್ಲ. ಈ ನಾಡಿನ ಎಲ್ಲರಿಗೂ ಬೇಕಾದ ವ್ಯಕ್ತಿ. ತಿಮ್ಮಪ್ಪನವರು ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಮಾತ್ರ ಕೊಡುಗೆಗಳನ್ನು ನೀಡಿಲ್ಲ. ಸಮಾಜವಾದಿ ಸಿದ್ದಾಂತ ಹಾಗು ಹೋರಾಟಗಳ ಮೂಲಕ ಇಡೀ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇವರನ್ನು ರಾಜ್ಯ ಸರ್ಕಾರ ಗುರುತಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. 
    ತಿಮ್ಮಪ್ಪನವರನ್ನು ಇಲ್ಲಿನ ನಗರಸಭೆ ಆಡಳಿತ ಈ ಬಾರಿ ದಸರಾ ಆಚರಣೆಗೆ ಆಹ್ವಾನಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಅದ್ದೂರಿ ದಸರಾ ಆಚರಣೆಗೆ ತಿಮ್ಮಪ್ಪನವರು ಚಾಲನೆ ನೀಡುತ್ತಿರುವುದು ಮತ್ತಷ್ಟು ವೈಭವ ಪಡೆದುಕೊಳ್ಳಲಿದೆ ಎಂಬ ಆಶಯ ಇಲ್ಲಿನ ನಿವಾಸಿಗಳು ಹೊಂದಿದ್ದಾರೆ. 


    ತಿಮ್ಮಪ್ಪನವರಿಗೆ ಆಹ್ವಾನ: 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ನೇತೃತ್ವದಲ್ಲಿ ನಾಡಹಬ್ಬ ದಸರಾ ಆಚರಣೆ ಸಮಿತಿ ವತಿಯಿಂದ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ತೆರಳಿ ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಲಾಯಿತು. 
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ನಾಡಹಬ್ಬ ದಸರಾ ಆಚರಣೆ ಸ್ವಾಗತ ಸಮಿತಿ ಅಧ್ಯಕ್ಷೆ ಲತಾ ಚಂದ್ರಶೇಖರ್, ಸದಸ್ಯರಾದ ಬಷೀರ್ ಅಹಮದ್, ಬಿ. ಶಶಿಕಲಾ,  ಪರಿಸರ ಅಭಿಯಂತರ ಪ್ರಭಾಕರ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್, ಬಿಜೆಪಿ ಮಂಡಲ ಸೇರಿದಂತೆ ವಿವಿಧೆಡೆ ರಾಷ್ಟ್ರಪಿತ ಗಾಂಧಿ ಜಯಂತಿ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಬಿಜೆಪಿ ತಾಲೂಕು ಮಂಡಲ, ಲಯನ್ಸ್  ಕ್ಲಬ್ ಶುಗರ್ ಟೌನ್, ಬಿಪಿಎಲ್ ಸಂಘ ಸೇರಿದಂತೆ ವಿವಿಧೆಡೆ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು. 
    ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪನಮನ, ನಂತರ ವಿಶೇಷವಾಗಿ ಈ ಬಾರಿ ಮಕ್ಕಳಿಂದ ಧರ್ಮ ಗ್ರಂಥಗಳಾದ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಸಂದೇಶ ವಾಚನ ನಡೆಯಿತು. ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ರವಿಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳಾದ  ಎಲ್. ಪ್ರವೀಣ್‌ಕುಮಾರ್, ಮೋಹನ್‌ರಾಜ್ ಶೆಟ್ಟಿ, ಯೋಗೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಸಂಘ ಹಾಗು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಪಾಲ್ಗೊಂಡಿದ್ದರು. 


ಭದ್ರಾವತಿಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ನಗರದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ  ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ಬಿಜೆಪಿ ಮಂಡಲದಿಂದ ಲಾಲ್ ಬಹದ್ದೂರ್ ಶಾಸ್ತ್ರಿ-ಗಾಂಧಿ ಜಯಂತಿ : 
    ಮಂಡಲದ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ನಗರದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ  ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಖಾದಿ ಗ್ರಾಮೋದ್ಯೋಗ ಭವನದಲ್ಲಿ ಖಾದಿ ಖರೀದಿಸಲಾಯಿತು.
    ಪ್ರಧಾನ ಕಾರ್ಯದರ್ಶಿಗಳಾ ಚನ್ನೇಶ್ ಮತ್ತು ಮೊಸರಳ್ಳಿ ಅಣ್ಣಪ್ಪ, ಮುಖಂಡರಾದ ಮಂಗೋಟೆ ರುದ್ರೇಶ್, ಎಚ್. ತೀರ್ಥಯ್ಯ, ರಾಜಶೇಖರ್ ಉಪ್ಪಾರ, ಧನುಷ್ ಬೋಸ್ಲೆ, ಜಿ. ಆನಂದ್‌ಕುಮಾರ್, ಸರಸ್ವತಿ, ರವಿಕುಮಾರ್, ರಘುರಾವ್, ನಿರಂಜನ್ ಗೌಡ, ಕಾ.ರಾ ನಾಗರಾಜ್,  ಸುಲೋಚನಾ ಪ್ರಕಾಶ್, ಮಂಜುಳಾ, ಡಾ. ಜಿ.ಎಂ ನಟರಾಜ್, ಬಸವರಾಜ್ ಆಚಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮೋರ್ಚಾ, ಮಹಾಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. 


ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಲಯನ್ಸ್ ಕ್ಲಬ್ ಶುಗರ್ ಟೌನ್‌ನಲ್ಲಿ ಗಾಂಧಿ ಜಯಂತಿ :  
    ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು.
    ಕ್ಲಬ್ ಆವರಣದಲ್ಲಿರುವ ಕೋಟಾ ಶಿವರಾಮ ಕಾರಂತ ವನದಲ್ಲಿ ಶ್ರಮದಾನ ನಡೆಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕ್ಲಬ್ ಅಧ್ಯಕ್ಷ ಆರ್. ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ತಮ್ಮೇಗೌಡ, ಎಂ.ಸಿ ಯೋಗೀಶ್, ಡಾ. ಸಿ.ಆರ್ ಗುರುರಾಜ್, ಲಿಂಗೋಜೀರಾವ್, ಮಂಜುನಾಥ್, ಕೃಷ್ಣ ,ನಾಗರಾಜ್ ಸೋಲಾರ್, ಮಧುಸೂದನ್ ಮತ್ತು ವಿಜಯ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
    ಬಿಪಿಎಲ್ ಸಂಘದಿಂದ ಗಾಂಧಿ ಜಯಂತಿ :
    ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
    ಸಂಘದ ಅಧ್ಯಕ್ಷ ಬಿ. ಜಗದೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಳಳು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸ್ಥಳೀಯರು ಪಾಲ್ಗೊಂಡಿದ್ದರು.