ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಭದ್ರಾ ನಾಲೆಗೆ ನಿರ್ಮಿಸಲಾಗಿದ್ದ ಸೇತುವೆ ಶಿಥಿಲಗೊಂಡು ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಭದ್ರಾವತಿ: ತಾಲೂಕಿನಲ್ಲಿ ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ ಭದ್ರಾ ನಾಲೆಗೆ ನಿರ್ಮಿಸಲಾಗಿದ್ದ ಸೇತುವೆ ಶಿಥಿಲಗೊಂಡು ಕುಸಿದು ಬಿದ್ದಿರುವ ಘಟನೆ ನಡೆದಿದೆ.
ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಭದ್ರಾ ನಾಲೆಗೆ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದೆ. ಹಂಚಿನ ಸಿದ್ದಾಪುರ ಗ್ರಾಮದಿಂದ ಸಿದ್ದೇಶ್ವರ ದೇವಸ್ಥಾನ ಹಾಗು ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಸೇತುವೆ ಕುಸಿದು ಬಿದ್ದಿರುವ ಹಿನ್ನಲೆಯಲ್ಲಿ ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಸೇತುವೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಧಾರಾಕಾರವಾಗಿ ಸುರಿದ ಮಳೆ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ ಉಂಟಾಗಿರುವ ಘಟನೆಗಳು ಸಹ ನಡೆದಿದ್ದು, ನಾಡಹಬ್ಬ ಹಬ್ಬ ದಸರಾ ಹಿನ್ನಲೆಯಲ್ಲಿ ಹಬ್ಬದ ಸಂಭ್ರಮದ ಸಂಭ್ರಮದಲ್ಲಿ ತೊಡಗಿದ್ದ ಗ್ರಾಮಸ್ಥರ ಸಂತಸ ಕಸಿದುಕೊಂಡಿದೆ.